ಕಲಬುರಗಿ: ನಮ್ಮ ಜೀವನ ಮತ್ತೊಬ್ಬರಿಗೆ ಪಾಠವಾಗದಿದ್ದರೂ ಪರವಾಗಿಲ್ಲ ಆದರೆ ನಮ್ಮ ಜೀವನ ಬೇರೆಯವರಿಗೆ ಆಟವಾಗದಿರಲಿ ಎಂದು ಸಾಹಿತಿ  ಗುಂಡೆರಾವ ಮುಡಬಿ ಹೇಳಿದರು.

ನಗರದ ಭವಾನಿ ನಗರದ ಬಬಲಾದ ಮಠದಲ್ಲಿ 159ನೇ ಶಿವಾನುಭವಗೋಷ್ಠಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡುತ್ತ  ಸುಖದ ಹಿಂದೆ ಬಿದ್ದು ನಿರಾಸೆ ಆಗುವುದಕ್ಕಿಂತ, ವಾಸ್ತವದ ಬದುಕಿನ ಜೊತೆಗೆ ಸಾಗುವುದು ಒಳ್ಳೆಯದು ಹಾಗೆ ಶರಣರು ತಮ್ಮ ವಾಸ್ತವದ ಬದುಕಿನೊಂದಿಗೆ ಜೀವನ ಸಾಗಿಸಿ ಸಮೃದ್ಧ ಸಮಾಜ ನಿರ್ಮಿಸುವ ಕಾರ್ಯ ಮಾಡಿದ್ದಾರೆಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಗುಲಬರ್ಗಾ ಜಿಲ್ಲಾ ನ್ಯಾಯವಾದಿಗಳ  ಸಂಘದ  ಸಹ ಕಾರ್ಯದರ್ಶಿ ನ್ಯಾಯವಾದಿ ಶಾಂತಪ್ಪ ಚಿಕ್ಕಳ್ಳಿ ಮಾತನಾಡುತ್ತಾ ಆಧುನಿಕ ಯುಗದಲ್ಲಿ ಮೊಬೈಲ್ ಧಾರವಾಹಿಗಳಲ್ಲಿ ಮಕ್ಕಳು ದಾರಿ ಬಿಡುವ ಸಂದರ್ಭದಲ್ಲಿ ಸಂಸ್ಕಾರದ ಬೀಜ ಬಿತ್ತಿ ಒಳ್ಳೆಯ ಸಮಾಜ ನಿರ್ಮಾಣ ಮಾಡುತ್ತಿರುವ ಶ್ರೀಮಠದ ಕಾರ್ಯ ಶ್ಲಾಘನೀಯ  ಎಂದು ಹೇಳಿದರು.

ಶ್ರೀ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಗುರುಪಾದ ಲಿಂಗ ಮಹಾಸ್ವಾಮಿಗಳು ನೇತೃತ್ವ ವಹಿಸಿದರು. ಕಾರ್ಯಕ್ರಮದಲ್ಲಿ ಗುರುರಾಜ ಬಿರಾದರ, ಸಂಗಮೇಶ ನಾಗೂರ, ನ್ಯಾಯವಾದಿ ಹಣಮಂತರಾಯ ಅಟ್ಟೂರ, ಕವಿತಾ ದೇಗಾಂವ, ಸೌಮ್ಯ ಶ್ರೀವಾತ್ಸವ, ಸಿದ್ದಣ್ಣ ವಾಡಿ, ಶರಣ ಪಾಟೀಲ, ರೇವಣಸಿದ್ದಯ್ಯ ಶಾಸ್ತ್ರಿ, ಶಾಂತು ಕಲ್ಬುರ್ಗಿ, ವೀರಣ್ಣ ಸ್ವಾದಿ, ನ್ಯಾಯವಾದಿ ರವೀಂದ್ರ ಬಂಟನಳ್ಳಿ, ಗುರುರಾಜ ಹಸರಗುಂಡಗಿ, ಮಲ್ಲಿಕಾರ್ಜುನ ಹುಮನಾಬಾದ ಸೇರಿದಂತೆ ಹಲವಾರು ಜನ ಭಾಗವಹಿಸಿದರು. ಇದೇ ಸಂದರ್ಭದಲ್ಲಿ  ಖ್ಯಾತ ಸಂಗೀತ ಕಲಾವಿದರಾದ ಗೌರಿಶಂಕರ ಚಕ್ಕಿ ಅವರಿಗೆ ವಿಶೇಷವಾಗಿ ಗೌರವಿಸಲಾಯಿತು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

27 mins ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

3 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

3 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

3 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

3 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420