ಬಿಸಿ ಬಿಸಿ ಸುದ್ದಿ

ರಾಜಾ ವೆಂಟಕಪ್ಪ ನಾಯಕರಿಗೆ ಸಚಿವ ಸ್ಥಾನ ನೀಡಲೇಬೇಕು; ಹಣಮಂತ ಕಟ್ಟಿಮನಿ

ಸುರಪುರ: ಕಳೆದ ಏಳು ಚುನಾವಣೆಗಳಲ್ಲಿ ಸ್ಪರ್ಧಿಸಿ ನಾಲ್ಕು ಬಾರಿ ಶಾಸಕರಾಗಿರುವ ನಮ್ಮ ನಾಯಕರಾದ ರಾಜಾ ವೆಂಕಟಪ್ಪ ನಾಯಕ ಅವರಿಗೆ ಈಬಾರಿ ಸಚಿವಸ್ಥಾನ ನೀಡುವಂತೆ ತಾಲೂಕಿನ ಸಮಸ್ತ ದಲಿತ ಮಾದಿಗ ಸಮುದಾಯ ಒತ್ತಾಯಿಸುತ್ತದೆ ಎಂದು ದಲಿತಪರ ಹೋರಾಟಗಾರ ಹಣಮಂತ ಕಟ್ಟಿಮನಿ ಬೊಮ್ಮನಹಳ್ಳಿ ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,ರಾಜಾ ವೆಂಕಟಪ್ಪ ನಾಯಕರು ಒಬ್ಬ ಹಿರಿಯ ರಾಜಕಾರಣಿ ಅವರು ಪಕ್ಷಕ್ಕಾಗಿ ಅನೇಕ ವರ್ಷಗಳ ಸೇವೆ ಸಲ್ಲಿಸಿದ್ದಾರೆ.ನಾಲ್ಕು ಬಾರಿ ಶಾಸಕರಾಗಿದ್ದಾರೆ,ಆದ್ದರಿಂದ ಅವರಿಗೆ ಈಬಾರಿ ಸಚಿವ ಸ್ಥಾನ ನೀಡಲೆಬೇಕು,ಇದು ನಮ್ಮ ಎಲ್ಲಾ ಮಾದಿಗ ಸಮಾಜದ ಜನರ ಪರವಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು,ಕೆಪಿಸಿಸಿ ಅಧ್ಯಕ್ಷರು,ಶಾಸಕಾಂಗ ಪಕ್ಷದ ನಾಯಕರು ಹಾಗೂ ಕಾಂಗ್ರೆಸ್ ಹೈಕಮಾಂಡ್‍ಗೆ ಒತ್ತಾಯಿಸುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಯುವ ಮುಖಂಡ ಬಸವರಾಜ ಮುಷ್ಠಳ್ಳಿ ಡಿ.ಸಿ ಮಾತನಾಡಿ,ರಾಜಾ ವೆಂಕಟಪ್ಪ ನಾಯಕ ಅವರಿಗೆ ಸಚಿವ ಸ್ಥಾನ ಕೊಡುವುದರ ಮೂಲಕ ಅವರ ಸೇವೆಗೆ ಕಾಂಗ್ರೆಸ್ ಪಕ್ಷ ಗೌರವ ನೀಡಬೇಕು ಎಂದು ಒತ್ತಾಯಿಸುತ್ತೇವೆ ಹಾಗೂ ಅದರಂತೆ ನಮ್ಮ ಸಮಾಜದ ಹಿರಿಯ ನಾಯಕರಾಗಿರುವ ಎಚ್.ಆಂಜನೇಯ ಅವರಿಗೆ ವಿಧಾನಪರಿಷತ್ ಸ್ಥಾನ ನೀಡಿ ಸಚಿವರನ್ನಾಗಿ ಮಾಡಬೇಕು ಎಂದು ಆಗ್ರಹಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ರಾಜಾ ಅಪ್ಪಾರಾವ್ ನಾಯಕ,ಸಂಜೀವಪ್ಪ ಕಟ್ಟಿಮನಿ ಆಲ್ದಾಳ,ದುರ್ಗಪ್ಪ ರುಕ್ಮಾಪುರ ಇದ್ದರು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ವಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

25 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

1 hour ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago