ರಾಜಾ ವೆಂಕಟಪ್ಪ ನಾಯಕಗೆ ಸಚಿವ ಸ್ಥಾನಕ್ಕೆ ವೀರಶೈವ ಲಿಂಗಾಯತ ಮುಖಂಡರ ಆಗ್ರಹ

0
16

ಸುರಪುರ:ರಾಜಾ ವೆಂಕಟಪ್ಪ ನಾಯಕ ಅವರು ಒಬ್ಬ ಹಿರಿಯ ಮುತ್ಸದ್ಧಿ ರಾಜಕಾರಣಿಯಾಗಿದ್ದಾರೆ,ಅಲ್ಲದೆ ನಾಲ್ಕು ಬಾರಿ ಶಾಸಕರಾಗಿದ್ದರು ಅವರು ಎಂದೂ ಸಚಿವ ಸ್ಥಾನಕ್ಕೆ ಆಸೆ ಪಟ್ಟವರಲ್ಲ ಈಬಾರಿ ಅವರಿಗೆ ಸಚಿವ ಸ್ಥಾನ ನೀಡಲೆಬೇಕು ಎಂದು ವೀರಶೈವ ಲಿಂಗಾಯತ ಸಮುದಾಯದ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,ರಾಜಾ ವೆಂಕಟಪ್ಪ ನಾಯಕ ಅವರು ಯಾದಗಿರಿ ಕಲಬುರ್ಗಿ ಬೀದರ ಜಿಲ್ಲೆಯಲ್ಲಿನ ಏಕೈಕ ಎಸ್ಟಿ ಸಮುದಾಯದ ಶಾಸಕರಾಗಿದ್ದಾರೆ.ಅಲ್ಲದೆ ಇದು ತಮ್ಮ ಕೊನೆಯ ಚುನಾವಣೆ ಎಂದು ಈಗಾಗಲೇ ಹೇಳಿಕೊಂಡಿದ್ದಾರೆ.ಆದ್ದರಿಂದ ಈಬಾರಿ ಅವರಿಗೆ ಸಚಿವ ಸ್ಥಾನ ಕೊಟ್ಟರೆ ಅವರ ಇಷ್ಟು ವರ್ಷಗಳಕಾಲ ಪಕ್ಷನಿಷ್ಠರಾಗಿದ್ದುದಕ್ಕೆ ಪಕ್ಷ ಅವರಿಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ಮತಕ್ಷೇತ್ರದ ಎಲ್ಲಾ ವೀರಶೈವ ಲಿಂಗಾಯತ ಸಮುದಾಯದ ಕಾಂಗ್ರೆಸ್ ಮುಖಂಡರು ಮತ್ತು ಜನತೆ ಒತ್ತಾಯವನ್ನು ಮಾಡುತ್ತೇವೆ.

Contact Your\'s Advertisement; 9902492681

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರೆ ಈಗ ಪಕ್ಷದ ಅಧ್ಯಕ್ಷರಾಗಿದ್ದಾರೆ,ಸಿದ್ದರಾಮಯ್ಯನವರು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ,ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರವರು ಎಲ್ಲರಿಗೂ ನಾವು ಒತ್ತಾಯಿಸುತ್ತಿದ್ದು ರಾಜಾ ವೆಂಕಟಪ್ಪ ನಾಯಕ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ನಯೋಪ್ರಾ ಮಾಜಿ ಅಧ್ಯಕ್ಷ ಸೂಗುರೇಶ ವಾರದ,ಮುಖಂಡರಾದ ಬಸವರಾಜ ಜಮದ್ರಖಾನಿ,ಶರಣು ಅರಕೇರಿ,ಶಿವರಾಜ ಕಲಕೇರಿ ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಕಾಂಗ್ರೆಸ್ ಮುಖಂಡರಾದ ಮಾಜಿ ಎಪಿಎಮ್‍ಸಿ ಸದಸ್ಯ ಮಲ್ಲು ಸಾಹುಕಾರ ಮುಧೋಳ,ಶಿವು ಸಾಹುಕಾರ ರುಕ್ಮಾಪುರ,ಚಂದ್ರು ಆವಂಟಿ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here