ಸುರಪುರ:ರಾಜಾ ವೆಂಕಟಪ್ಪ ನಾಯಕ ಅವರು ಒಬ್ಬ ಹಿರಿಯ ಮುತ್ಸದ್ಧಿ ರಾಜಕಾರಣಿಯಾಗಿದ್ದಾರೆ,ಅಲ್ಲದೆ ನಾಲ್ಕು ಬಾರಿ ಶಾಸಕರಾಗಿದ್ದರು ಅವರು ಎಂದೂ ಸಚಿವ ಸ್ಥಾನಕ್ಕೆ ಆಸೆ ಪಟ್ಟವರಲ್ಲ ಈಬಾರಿ ಅವರಿಗೆ ಸಚಿವ ಸ್ಥಾನ ನೀಡಲೆಬೇಕು ಎಂದು ವೀರಶೈವ ಲಿಂಗಾಯತ ಸಮುದಾಯದ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,ರಾಜಾ ವೆಂಕಟಪ್ಪ ನಾಯಕ ಅವರು ಯಾದಗಿರಿ ಕಲಬುರ್ಗಿ ಬೀದರ ಜಿಲ್ಲೆಯಲ್ಲಿನ ಏಕೈಕ ಎಸ್ಟಿ ಸಮುದಾಯದ ಶಾಸಕರಾಗಿದ್ದಾರೆ.ಅಲ್ಲದೆ ಇದು ತಮ್ಮ ಕೊನೆಯ ಚುನಾವಣೆ ಎಂದು ಈಗಾಗಲೇ ಹೇಳಿಕೊಂಡಿದ್ದಾರೆ.ಆದ್ದರಿಂದ ಈಬಾರಿ ಅವರಿಗೆ ಸಚಿವ ಸ್ಥಾನ ಕೊಟ್ಟರೆ ಅವರ ಇಷ್ಟು ವರ್ಷಗಳಕಾಲ ಪಕ್ಷನಿಷ್ಠರಾಗಿದ್ದುದಕ್ಕೆ ಪಕ್ಷ ಅವರಿಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ಮತಕ್ಷೇತ್ರದ ಎಲ್ಲಾ ವೀರಶೈವ ಲಿಂಗಾಯತ ಸಮುದಾಯದ ಕಾಂಗ್ರೆಸ್ ಮುಖಂಡರು ಮತ್ತು ಜನತೆ ಒತ್ತಾಯವನ್ನು ಮಾಡುತ್ತೇವೆ.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರೆ ಈಗ ಪಕ್ಷದ ಅಧ್ಯಕ್ಷರಾಗಿದ್ದಾರೆ,ಸಿದ್ದರಾಮಯ್ಯನವರು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ,ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರವರು ಎಲ್ಲರಿಗೂ ನಾವು ಒತ್ತಾಯಿಸುತ್ತಿದ್ದು ರಾಜಾ ವೆಂಕಟಪ್ಪ ನಾಯಕ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ನಯೋಪ್ರಾ ಮಾಜಿ ಅಧ್ಯಕ್ಷ ಸೂಗುರೇಶ ವಾರದ,ಮುಖಂಡರಾದ ಬಸವರಾಜ ಜಮದ್ರಖಾನಿ,ಶರಣು ಅರಕೇರಿ,ಶಿವರಾಜ ಕಲಕೇರಿ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಕಾಂಗ್ರೆಸ್ ಮುಖಂಡರಾದ ಮಾಜಿ ಎಪಿಎಮ್ಸಿ ಸದಸ್ಯ ಮಲ್ಲು ಸಾಹುಕಾರ ಮುಧೋಳ,ಶಿವು ಸಾಹುಕಾರ ರುಕ್ಮಾಪುರ,ಚಂದ್ರು ಆವಂಟಿ ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…