ಬಾಬುರಾವ ಚಿಂಚನಸೂರಗೆ ಸಚಿವ ಸ್ಥಾನ, ತಿಪ್ಪಣ್ಣಪ್ಪ ಕಮಕನೂರಗೆ ನಿಗಮ ನೀಡಲು ಒತ್ತಾಯ

0
306

ಕಲಬುರಗಿ: ಕರ್ನಾಟಕ ಕೋಲಿ ಸಮಾಜದ ಏಕೈಕ ನಾಯಕ ಬಾಬುರಾವ್ ಚಿಂಚನಸೂರವರನ್ನು ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿ ಮುಂದೆ ವಿಧಾನ ಪರಿಷತ್ತಿನ ಸದಸ್ಯರಾಗಿ ನೇಮಕ ಮಾಡಬೇಕೆಂದು ಹಾಗೂ ಇನ್ನೋರ್ವ ಕೋಲಿ ಸಮಾಜದ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರವರನ್ನು ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಮುಂದೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕೆಂದು ಕಲ್ಯಾಣ ಕರ್ನಾಟಕ ಕೋಲಿಸ ಮಾಜದ ಯುವ ಘಟಕದ ಅಧ್ಯಕ್ಷ ಅನೀಲಕುಮಾರ ಕೂಡಿ, ಉಪಾಧ್ಯಕ್ಷ ಉಮೇಶ ಹದಗಲ್, ಪ್ರಧಾನ ಕಾರ್ಯದರ್ಶಿಗಳಾದ ಅರುಣಕುಮಾರ ಮನವಿ ಮಾಡಿದ್ದಾರೆ.

ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಕೋಲಿ ಸಮಾಜದ ಮತಗಳು ಕಾಂಗ್ರೇಸ್ ಪಕ್ಷದ ಪರವಾಗಿ ಮತ ಹಾಕಿಸಲು ಅವರ ಶ್ರಮ ಬಹಳವಿದ. ಲೋಕಸಭಾ ಚುನಾವಣೆಗೆ ಕಾಂಗ್ರೇಸ್ ಪಕ್ಷಕ್ಕೆ ಹೆಚ್ಚಿನ ಲಾಭವಾಗುವದರಿಂದ ಕೋಲಿ ಸಮಾಜದ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಸ್ಥಾನಮಾನ ನೀಡಬೇಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ. ಅಧ್ಯಕ್ಷ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರಗೆ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here