ವೆಂಕಟಪ್ಪ ನಾಯಕಗೆ ಸಚಿವ ಸ್ಥಾನ ನೀಡಲು ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆ

0
12

ಸುರಪುರ: ಕ್ಷೇತ್ರದ ನೂತನ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ವಿಧಾನಸಭೆ ಚುನಾವಣೆಯಲ್ಲಿ ನಾಲ್ಕನೇ ಬಾರಿ ಗೆಲುವು ಸಾಧಿಸಿದ್ದಕ್ಕಾಗಿ ಹಾಗೂ ಸರಕಾರದಲ್ಲಿ ಸಚಿವ ಸ್ಥಾನ ದೊರಕಲೆಂದು ಪ್ರಾರ್ಥಿಸಿ ರಾಜಾ ವೆಂಕಟಪ್ಪ ನಾಯಕ ಅಭಿಮಾನಿಗಳು ತಿರುಪತಿ ವೆಂಕಟರಮಣನಿಗೆ ವಿಶೇಷ ಪೂಜೆ ನೆರವೇರಿಸಿದರು.

ನೂತನ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಈ ಚುನಾವಣೆಯಲ್ಲಿ ಹೆಚ್ಚಿನ ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದು ನಾಲ್ಕನೇ ಬಾರಿಗೆ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಹಿರಿಯ ರಾಜಕಾರಣಿಗಳು ಹಾಗೂ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ಧರಾಗಿ ನಡೆದುಕೊಳ್ಳುವ ನಿಷ್ಠಾವಂತ ರಾಜಕಾರಣಿಯಾಗಿದ್ದಾರೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಿ ಅವರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಯಾದಗಿರಿ ಜಿಲ್ಲೆ ಉಸ್ತುವಾರಿ ನೀಡಬೇಕು ಎಂದು ಪೂಜೆ ಸಲ್ಲಿಸಿದ ಕಾಂಗ್ರೆಸ್ ಯುವ ಮುಖಂಡ ಪ್ರಕಾಶ ಯಾದವ್ ಹೇಳಿದ್ದಾರೆ, ಆನಂದ ಗಡಗಡೆ, ವಿರೇಶ ಪಂಚಾಂಗಮಠ, ಸುನೀಲಕುಮಾರ ಮಡ್ಡಿ, ಪವನಕುಮಾರ ರಾಠಿ ಇತರರು ಉಪಸ್ಥಿತಿರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here