ಕಲಬುರಗಿ: ಜಾತ್ರೆಗಳು ಮನುಷ್ಯನಿಗೆ ಸನ್ಮಾರ್ಗದ ದಾರಿ ತೋರುವುದಲ್ಲದೆ ಒಬ್ಬರಿಗೊಬ್ಬರ ಮನಸ್ಸು ಗಟ್ಟಿಗೊಳಿಸುತ್ತವೆ ಎಂದು ಪುರಾಣ ಪುಟಗಳಾದ ಸಂಗಮೇಶ ಶಾಸ್ತ್ರಿ ಮಾಶಾಳ ಹೇಳಿದರು.
ತಾಜ ಸುಲ್ತಾನಪುರ ಗ್ರಾಮದಲ್ಲಿ ಶ್ರೀ ರಾಮಲಿಂಗ ಚೌಡೇಶ್ವರಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಗೀತ ಹಾಗೂ ಅಧ್ಯಾತ್ಮಿಕ ಚಿಂತನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಆಧುನಿಕ ಯುಗದಲ್ಲಿ ಮನುಷ್ಯನು ದುಡ್ಡಿನಿಂದ ಶ್ರೀಮಂತನಾದರೂ ಸಂಸ್ಕಾರದ ಕೊರತೆಯಿಂದ ಜೀವನ ಅದೋಗತಿಗೆ ತಲುಪಿ ಅತೃಪ್ತಿಯ ಜೀವನ ಸಾಗಿಸುತ್ತಿದ್ದಾನೆ. ಗ್ರಾಮೀಣ ಪ್ರದೇಶದಲ್ಲಿ ಜಾತ್ರೆ, ಆಧ್ಯಾತ್ಮಿಕ ಕಾರ್ಯಕ್ರಮಗಳು ಮನುಷ್ಯನನ್ನು ಒಂದುಗೂಡಿಸಿ ಜಾತ್ಯಾತೀತ, ಪಕ್ಷಾತೀತ ಸಮಾಜ ಕಟ್ಟಲು ಪ್ರೇರಣೆಯಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು.
ಇದೆ ಸಂದರ್ಭದಲ್ಲಿ ಕಲಾವಿದರಾದ ಸಂಗಮೇಶ ಶಾಸ್ತ್ರಿ ಮಾಶಾಳ, ನಾಗರಾಜ ಪಾಟೀಲ, ಜನಪದ ಕಲಾವಿದ ರಾಜು ಹೆಬ್ಬಾಳ, ಶಿವಾನಂದ ಹಿತ್ತಲಶಿರೂರ, ವಿನೋದಕುಮಾರ ದಸ್ತಾಪುರ ಅವರಿಗೆ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ, ಮಾಜಿ ಶಾಸಕಿಯರಾದ ಅರುಣಾದೇವಿ ಸಿ ಪಾಟೀಲ ರೇವೂರ,ಗ್ರಾಮ ಪಂಚಾಯತ ಅಧ್ಯಕ್ಷರಾದ ವಿನೋದ ಕುಮಾರ ಸಂಘ, ಕಮಿಟಿಯ ಅಧ್ಯಕ್ಷರಾದ ಗುರುರಾಜ ಚಿಮದಿ, ನ್ಯಾಯವಾದಿ ಹಣಮಂತರಾಯ ಎಸ್ ಅಟ್ಟೂರ, ಗ್ರಾಮ ಪಂಚಾಯತ ಸದಸ್ಯರಾದ ರವಿಕುಮಾರ ಶಹಾಪುರ ಕರ, ಗುರುಶಾಂತ ಹಾಂವಾ, ಶಾಂತಕುಮಾರ ಮದನಕರ, ಗುರು ಮಗಿ, ಭಾಗಣ್ಣ ಜವರಕರ, ಸಂಜೀವಕುಮಾರ ಜವರಕರ, ಭರತ ಹೊಳಕುಂದಿ ಪ್ರಮುಖರಾದ ಅಣ್ಣಪ್ಪಾ ಕಂತಿ, ಭೀಮಣ್ಣ ಕುದುರಿ, ಶಿವಕುಮಾರ ಧಾನಪಗೋಳ, ಚಂದ್ರಶೇಖರ ಪಾಟೀಲ, ಸುಭಾಷ ಓಗಿ, ಚಂದ್ರಶೇಖರ ಅಂಬಲಗಿ, ಸೂರ್ಯಕಾಂತ ಚನ್ನಬಟ್ಟಿ, ಶರಣು ಕುದುರಿ, ಅರ್ಜುನ ಗೊಬ್ಬುರಕರ,ಯಲ್ಲಾಲಿಂಗ ಖೇಳಗಿ ಸೇರಿದಂತೆ ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮದ ಅನೇಕ ಜನರು ಭಾಗವಹಿಸಿದ್ದರು. ಶ್ರೀ ರಾಮಲಿಂಗ ಚೌಡೇಶ್ವರಿ ಜಾತ್ರಾ ಮಹೋತ್ಸವ ನಿಮಿತ್ಯ ಚೌಡೇಶ್ವರಿ ಮೂರ್ತಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅನೇಕ ವಾದ್ಯಗಳೊಂದಿಗೆ ಭವ್ಯವಾದ ಮೆರವಣಿಗೆ ಜರುಗಿತು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…