ವಾಡಿ: ಬೈಕ್ ಸ್ಕಿಡ್ ಆಗಿ ವಾಹನ ಅಪಘಾತ ಸಂಭವಿಸಿದ ಪರಿಣಾಮ ಹಿಂಬದಿ ಸವಾರ ಮಹಿಳೆ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ-ಹಳಕರ್ಟಿ ಗ್ರಾಮ ಮಧ್ಯದ ರಾಷ್ಟ್ರೀಯ ಹೆದ್ದಾರಿಯ ಮೆಲೆ ಸಂಭವಿಸಿದೆ.
ಹೀನಾಬೇಗಂ ಮಹ್ಮದ್ ಇಮ್ರಾನ್ (27) ಮೃತ ದುರ್ದೈವಿ. ರಾಯಚೂರು ನಗರದ ನಿವಾಸಿಯಾಗಿರುವ ಇವರು ತಂದೆಯ ಜತೆಗೆ ಬೈಕ್ ಮೇಲೆ ಕಲಬುರಗಿಗೆ ತೆರಳುತ್ತಿದ್ದರು. ವೇಗವಾಗಿ ಚಲಿಸುತ್ತಿದ್ದ ಬೈಕ್ ಸ್ಕಿಡ್ ಆಗಿದೆ. ಪರಿಣಾಮ ಆಯತಪ್ಪಿ ಮಹಿಳೆ ರಸ್ತೆ ಮೇಲೆ ಬಿದ್ದಿದ್ದಾಳೆ. ಮಹಿಳೆಯ ಬಟ್ಟೆ ಚೈನ್ ಗೆ ಸುತ್ತಿಕೊಂಡ ಪರಿಣಾಮ ಸುಮಾರು 80 ಅಡಿವರೆಗೂ ಮಹಿಳೆಯನ್ನು ಎಳೆದುಕೊಂಡು ಹೋಗಿದೆ.
ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ವಾಡಿ ಸಮುದಾಯ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸುವ ಮೂಲಕ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮಧ್ಯಾಹ್ನ ವೇಳೆ ಮೃತ ಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…