ಬಿಸಿ ಬಿಸಿ ಸುದ್ದಿ

ಮುಖ್ಯಮಂತ್ರಿಗಳ ಸರಳತೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಸ್ವಾಗತ-ನಾಡೋಜ ಡಾ. ಮಹೇಶ ಜೋಶಿ

ಬೆಂಗಳೂರು; ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿ ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಾಹನ ಸಂಚಾರಕ್ಕೆ ನೀಡಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೆÇಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ. ಜೊತೆಗೆ ಹಾರ ತುರಾಯಿಗಳ ಬದಲು ಪುಸ್ತಗಳನ್ನು ಸ್ವೀಕರಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ನಿರ್ಧಾರವನ್ನು ಕನ್ನಡ ಸಾಹಿತ್ಯ ಪರಿಷತ್ತು ಗೌರವಿಸುವ ಮೂಲಕ ಅವರ ನಡೆಯನ್ನು ಸ್ವಾಗತಿಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅದ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳು ಶೀಘ್ರ ಪ್ರಯಾಣಕ್ಕಾಗಿ ಮಹಾನಗರಗಳಲ್ಲಿ ಜೀರೋ ಟ್ರಾಫಿಕ್ ಸೌಲಭ್ಯವನ್ನು ನೀಡುವ ಪರಿಪಾಠವಿದೆ. ಮುಖ್ಯಮಂತ್ರಿಗಳು ಯಾವ ರಸ್ತೆಯಲ್ಲಿ ತೆರಳುತ್ತಾರೆಂಬ ಮಾಹಿತಿ ಪಡೆದ ಸಂಚಾರಿ ಪೆÇಲೀಸರು ಆ ರಸ್ತೆಯಲ್ಲಿನ ವಾಹನ ಸಂಚಾರವನ್ನು 15-20 ನಿಮಿಷ ಮುಂಚೆಯೇ ನಿಲ್ಲಿಸಿ, ಮುಖ್ಯಮಂತ್ರಿಗಳ ವಾಹನ ಸರಾಗ ಸಂಚಾರಕ್ಕೆ ಅವಕಾಶ ಮಾಡುತ್ತಾರೆ. ಆ ಸಂದರ್ಭದಲ್ಲಿ ಸಾರ್ವಜನಿಕರಿಗೆ, ಪಾದಾಚಾರಿಗಳಿಗೆ ಹಾಗೂ ವಾಹನಗಳ ಸಂಚಾರವನ್ನು ತಡೆಯುತ್ತಾರೆ.

ಈ ಹಿಂದಿನ  ಮುಖ್ಯಮಂತ್ರಿಗಳು ಈ ಸೌಲಭ್ಯವನ್ನು ಪಡೆದಿದ್ದರು. ಆದರೆ, ಮಾನ್ಯ ಸಿದ್ದರಾಮಯ್ಯ ಅವರು ರಸ್ತೆಯಲ್ಲಿನ ಇತರೆ ವಾಹನ ಸವಾರರಿಗೆ/ ಸಾರ್ವಜನಿಕರಿಗೆ ಸಮಸ್ಯೆಯಾಗಬಾರದು ಎಂದು ಕಾರಣಕ್ಕೆ ಮಾದರಿ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಈ ನಿಲುವನ್ನು ಸಾರ್ವಜನಿಕರು ಸ್ವಾಗತಿಸಿದ್ದು ಇಂತಹ ನಿರ್ಧಾರದಿಂದ ಮುಖ್ಯಮಂತ್ರಿಗಳು ಜನರ ಮೆಚ್ಚುಗೆಗೆ ಪಾತ್ರರಾಗುತ್ತಾರೆ ಎಂದು ನಾಡೋಜ ಡಾ. ಮಹೇಶ ಜೋಶಿ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಸಮಾರಂಭದಲ್ಲಿ ಹಾರ ತುರಾಯಿಗಳನ್ನು ಸ್ವೀಕರಿಸುವುದಿಲ್ಲ ಎಂದು ತಿಳಿಸಿದ್ದಾರೆ. ಅದರ ಬದಲಿಗೆ ಪುಸ್ತಕ ಸ್ವೀಕರಿಸುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನ ಸ್ವೀಕರಿಸಿದ ತಕ್ಷಣ ತಾವು ಸಹ ಹಾರ ತುರಾಯಿಗಳನ್ನು ಸ್ವೀಕರಿಸುವ ಪದ್ಧತಿಯನ್ನು ನಿಲ್ಲಿಸಿದ್ದೇವೆ. ಬದಲಿಗೆ ಕನ್ನಡ ಪುಸ್ತಕ ಸ್ವಿಕರಿಸುವ ಮೂಲಕ ಪುಸ್ತಕ ಸಂಸ್ಕøತಿಯನ್ನು ಬೆಳೆಸುತ್ತಿದ್ದೇವೆ. ಇದೇ ಮಾದರಿ ಎಲ್ಲರೂ ಬಳಸಿದ್ದಲ್ಲಿ  ಕನ್ನಡ ನಾಡಿನಲ್ಲಿ ಒಂದು ಪರಂಪರೆಯಾಗಿ ಮುಂದುವರೆಯುವುದು. ಸಭೆ ಸಮಾರಂಭದಲ್ಲಿ ಎಲ್ಲರೂ ಹಾರ ತುರಾಯಿಗಳ ಬದಲು ಕನ್ನಡ ಪುಸ್ತಕಗಳನ್ನು ಸ್ವೀಕರಿಸುವ ಪದ್ಧತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

32 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

35 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

38 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago