ಪೊಲೀಸರು ದರ್ಗಾ ದ್ವಾರದಲ್ಲಿ ಅಡ್ಡಲಾಗಿ ಕಟ್ಟಿರುವ ಗೋಡೆ ತೆರವಿಗೆ ದಂಡಾಧಿಕಾರಿಗೆ ಮನವಿ

0
36

ಕಲಬುರಗಿ: ಜಿಲ್ಲೆಯ ಕಾಳಗಿ ತಾಲ್ಲೂಕಿನ ರಟಕಲ್ ಗ್ರಾಮದ ಐತಿಹಾಸಿಕ ಮಹೆಬೂಬ್ ಸುಬಾನಿ ದರ್ಗಾದ ಪ್ರವೇಶ ದ್ವಾರಕ್ಕೆ ಅಡ್ಡಲಾಗಿ ಪೊಲೀಸ್ ಅಧಿಕಾರಿಗಳು ಕಟ್ಟಿರುವ ಕಂಪೌಂಡ್ ಗೋಡೆ ತೆರವಿಗೆ ಒತ್ತಾಯಿಸಿ ಬುಧವಾರ ರಟಕಲ್ ಗ್ರಾಮ ಪಂಚಾಯತ್ ಎದುರುಗಡೆ ಸೌಹಾರ್ದ ಸಮಿತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಪೊಲೀಸರು ದರ್ಗಾ ಪ್ರವೇಶಕ್ಕೆ ಅಡ್ಡ ಗೋಡೆ ಕಟ್ಟಿರುವುದರಿಂದ ಗ್ರಾಮಸ್ಥರಿಗೆ ತೊಂದರೆಯಾಗುತರತಿದ್ದು, ತಕ್ಷಣ ದ್ವಾರದಲ್ಲಿ ಗೋಡೆ ತೆರವುಗೊಳಿಸಿ ನೂರಾರು ಭಕ್ತರಿಗೆ ಅನುಕೂಲ ಮಾಡಿಕೊಡಬೇಕೆಂದು ಧರಣಿ ಸ್ಥಳಕ್ಕೆ ಭೇಟಿದ ಕಾಳಗಿ ಉಪ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

Contact Your\'s Advertisement; 9902492681

ಧರಣಿ ಸತ್ಯಾಗ್ರಹದಲ್ಲಿ ಮಹಿಳೆಯರು ಸೇರಿದಂತೆ ಹಿರಿಯ ನಾಗರಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here