ಕಲಬುರಗಿ: ಇಲ್ಲಿನ ಶ್ರೀಸಿಮೆಂಟ್ ಕಂಪೆನಿಯ ವಿರುದ್ಧ ಕಳೆದ 183 ದಿನಗಳಿಂದ ವಿವಿಧ ಬೇಡಿಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸ್ಥಳದಲ್ಲಿ ರೈತ ಓರ್ವ ಅಸ್ವಸ್ಥರಾಗಿ ಮೃತಪಟ್ಟಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಸೇಡಂ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದ ನಿವಾಸಿ ದೇವಿಂದ್ರಪ್ಪ ಮಲ್ಲಣ್ಣ ಜೊಗೆರ (50) ಮೃತಪಟ್ಟ ಹೋರಾಟ ನಿರತ ರೈತ ಎಂದು ತಿಳಿದುಬಂದಿದೆ. ದೇವಿಂದ್ರಪ್ಪ ಶ್ರೀಸಿಮೆಂಟ್ ಕಂಪನಿಗೆ ತನ್ನ 2 ಎಕರೆ 20 ಗುಂಟೆ ಜಮೀನು ನೀಡಿದ್ದು, ಉದ್ಯೋಗ ಇಲ್ಲದೇ ಕೂಲಿ ಮಾಡಿಕೊಂಡಿದರು.
ಕಂಪನಿಯ ಜಾಬ್ ಕಾರ್ಡ್ ಕೊಟ್ಟು ಮಗನಿಗೆ ಉದ್ಯೋಗ ಕೊಡದೇ ಕಂಪನಿ ಮೊಸ ಮಾಡಿದೆ ಎಂದು ಆರೋಪಗಳು ಕೇಳಿಬಂದಿದೆ. ಮೃತ ವ್ಯಕ್ತಿ ಪತ್ನಿ ಶಾಂತಮ್ಮ, ಮಗಳು ನಾಗಮ್ಮ, ಮಗನಾದ ಮಲ್ಲಪ್ಪ ಹಾಗೂ ಸಲಭಾಗಪ್ಪ ಎಂಬ ಇಬ್ಬರು ಮೂವರು ಮಕ್ಕಳು ಇದ್ದಾರೆ.
ಸೇಡಂ ತಾಲೂಕಿನ ಕೋಡ್ಲಾ ಬೆನಕನಹಳ್ಳಿ ಶ್ರೀಸಿಮೆಂಟ್ ಕಂಪೆನಿ ಎದುರು ದಿನಾಂಕ 1/12/2022 ರಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ 183 ನೆ ದಿನಕ್ಕೆ ಕಾಲಿಟ್ಟಿದ್ದು, ಕಂಪೆನಿ ವಿಷಕಾರಿ ಗಾಳಿ ವಾಸನೆ ದಿಂದ ಧರಣಿಯಲ್ಲಿ ಕುಳಿತು ಭೂಮಿ ಕಳೆದುಕೊಂಡ ರೈತ ಧರಣಿ ಸತ್ಯಾಗ್ರಹ ಸ್ಥಳದಲ್ಲಿ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.
ಕಂಪನಿಯ ನಿರ್ಲಕ್ಷ್ಯ ಮತ್ತು ಮೊಸದ ಆಟಕ್ಕೆ ರೈತ ಓರ್ವ ಬಲಿಯಾಗಿದ್ದು, ಸಾವಿಗೆ ಶ್ರೀಸಿಮೆಂಟ್ ಕಂಪನಿ ನೆರ ಹೊಣೆ ಎಂದು ಕರ್ನಾಟಕ ಪ್ರಾಂತ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೇಟ್ಟಿ ಆರೋಪಿಸಿ,ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದ್ಯ ಶ್ರೀಸಿಮೆಂಟ್ ಕಂಪನಿಯ ವಿರುದ್ಧ ರೈತರು ಸೇರಿದಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮೃತ ಕುಟುಂಬಸ್ಥತರ ಆಕ್ರಮನಂದನ ಮುಗಿಲು ಮುಟ್ಟಿದೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…