ಬಿಸಿ ಬಿಸಿ ಸುದ್ದಿ

ಕೆಬಿಎನ್ ವಿವಿಯಲ್ಲಿ ನ್ಯಾಕ ಕಾರ್ಯಾಗಾರ

ಕಲಬುರಗಿ : ರಾಜ್ಯದ ವಿಶ್ವವಿದ್ಯಾಲಯಗಳು ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಸಾಧನೆ ಮತ್ತು ಬೋಧನೆ, ಸಂಶೋಧನೆಗಳಲ್ಲಿ ಉನ್ನತ್ತೀಕರಣ ಹೊಂದಿ ಗುರಿ ಸಾಧಿಸಲು ನ್ಯಾಕ್ ಮೌಲ್ಯಮಾಪನ ಮತ್ತು ಮಾನ್ಯತೆ ಅತಿ ಅವಶ್ಯಕವಾಗಿದೆ ಎಂದು ಕುವೆಂಪು ವಿಶ್ವ ವಿದ್ಯಾಲಯದ ಅನ್ವಯಿಕ ಭೂವಿಜ್ಞಾನ ವಿಭಾಗದ ಪ್ರಾದ್ಯಾಪಕ ಪ್ರೊ. ಆಶಫಕ್ ಅಹ್ಮದ್ ಅಭಿಪ್ರಾಯಪಟ್ಟರು. ಖಾಜಾ ಬಂದೇನವಾಜ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ “ನ್ಯಾಕ್ ಮೌಲ್ಯಮಾಪನ ಮತ್ತು ಮಾನ್ಯತೆ” ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ನ್ಯಾಕ್ ಮಂಡಳಿ ಸಕಾಲದಲ್ಲಿ ರೂಪಿಸುವ ನಿಯಮಗಳಿಂದ ವಿಶ್ವಾವಿದ್ಯಾಲಯ ಮತ್ತು ಕಾಲೇಜುಗಳ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸದಾ ಚಟುವಟಿಕೆಯಿಂದಿರುತ್ತಾರೆ. ಅದರ ಜೊತೆಗೆ ಸಂಶೋಧನೆ ಮತ್ತು ವಿಶೇಷ ಇತರೆ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಕಲಿಕೆಯಲ್ಲಿ ಆಸಕ್ತಿ ಮತ್ತು ಕ್ರಿಯಾಶೀಲತೆ ಬೆಳೆಯುತ್ತದೆ ಎಂದರು.

ಕೆಬಿಎನ್ ವಿವಿಯ ಉಪ ಕುಲಪತಿಗಳಾದ ಪ್ರೋ ಅಲಿ ರಜಾ ಮೂಸ್ವಿ ಅಧ್ಯಕ್ಷತೆವಹಿಸಿ ಮಾತನಾಡಿ ಕೆಬಿಎನ್ ವಿಶ್ವವಿದ್ಯಾಲಯದ ಸಮಗ್ರ ಶೈಕ್ಷಣಿಕ ಬೆಳವಣಿಗೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.

ಎಲ್ಲಾ ವಿಭಾಗಗಳ ಪ್ರಾಧ್ಯಾಪಕರು ಗುಣಮಟ್ಟದ ಬೋಧನೆ ಮತ್ತು ಸಂಶೋಧನೆಗೆ ಹೆಚ್ಚು ಆದ್ಯತೆ ನೀಡಬೇಕಿದೆ. ನ್ಯಾಕ್ ಮಾನ್ಯತೆ ಶ್ರೇಣಿಯಯಲ್ಲಿ ಉತ್ತಮ ಸ್ಥಾನಗಳಿಸಿ ವಿಶ್ವವಿದ್ಯಾಲಯ ಧನ ಸಹಾಯ ಆಯೋಗದಿಂದ ಅತ್ಯುತ್ತಮ ಯೋಜನೆಗಳನ್ನು ಪಡೆಯುವ ಮೂಲಕ ವೈಯಕ್ತಿಕ ಸಾಧನೆ ಮತ್ತು ಸಂಸ್ಥೆಯ ಪ್ರತಿಷ್ಠೆಯನ್ನು ಉನ್ನತಿ ಸಾಧನೆಗೆ ಆದ್ಯತೆ ನೀಡಿದಂತಾಗುತ್ತದೆ. ಅಲ್ಲದೇ ವಿವಿ ಬಗ್ಗೆ ಕೂಡ ಧನಾತ್ಮಕತೆ ಬೆಳೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಕಲಾ, ಭಾಷಾ, ಮಾನವೀಕತೆ, ಸಮಾಜ ವಿಜ್ಞಾನ ಹಾಗೂ ವಿಜ್ಞಾನ ವಿಭಾಗದ ಡೀನ್ ಡಾ ನಿಶಾತ ಆರೀಫ್ ಹುಸೇನಿ, ವೈದ್ಯಕೀಯ ನಿಕಾಯದ ಡೀನ ಡಾ. ಸಿದ್ದೇಶ್ ಮತ್ತು ಇಂಜಿನಿಯರಿಂಗ್ ನಿಕಾಯದ ಡೀನ ಪ್ರೊ. ಮೊಹಮ್ಮದ್ ಅಜಮ ಹಾಗೂ ಕೆಬಿಎನ್ ವಿವಿಯ ಎಲ್ಲ ನಿಕಾಯದ್ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ಹಫೀಜ್ ಸಮೀರ್ ಹುಸೇನಿ ಪ್ರಾರ್ಥಿಸಿದರು. ಐಕ್ಯೂಎಸಿ ಘಟಕದ ನಿರ್ದೇಶಕ ಡಾ. ಮೊಹಮ್ಮದ ಅಬ್ದುಲ್ ಬಷೀರ್ ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ಕೆಬಿಎನ್ ವಿವಿಯ ಕುಲಸಚಿವೆ ಡಾ. ರುಕ್ಸರ್ ರ್ ಫಾತಿಮಾ ವಂದಿಸಿದರು. ಡಾ. ಇರ್ಫಾನ್ ಅಲಿ ನಿರೂಪಿಸಿದರು.

ಕಾರ್ಯಾಗಾರದ ಮೊದಲನೆಯ ಅವಧಿಯಲ್ಲಿ ಪ್ರೊ.ಎಸ್.ಎ ಅಹ್ಮದ್ “ಆರಂಭಿಕ ಹಂತಗಳು ಮತ್ತು ಮಾರ್ಗಸೂಚಿ ಡೇಟಾವನ್ನು ಸಿದ್ಧಪಡಿಸುವುದು ಮತ್ತು ನಿರ್ವಹಿಸುವುದು” ವಿಷಯದ ಕುರಿತು ಭೋಧನೆ ನೀಡಿದರು.

ಎರಡನೆಯ ಅವಧಿಯಲ್ಲಿ “ನಿಮ್ಮ ಸಂಶೋಧನಾ ಪ್ರೊಫೈಲ್ ಅನ್ನು ನಿರ್ಮಿಸುವುದು ಮತ್ತು ಹೆಚ್ಚಿಸುವುದು” ವಿಷಯದ ಬಗ್ಗೆ ಕರ್ನಾಟಕದ ಕೇಂದ್ರೀಯ ವಿವಿಯ ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊ ರೋಮೆಟ್ ಉಪನ್ಯಾಸ ನೀಡಿದರು.

ಪ್ರತಿ ಅವಧಿ ಪ್ರಶ್ನೋತ್ತರ ಅವಧಿಯನ್ನು ಒಳಗೊಂಡಿತ್ತು. ಈ ಕಾರ್ಯಾಗಾರದಲ್ಲಿ ಕಲಾ, ಭಾಷಾ, ಮಾನವೀಕತೆ, ಸಮಾಜ ವಿಜ್ಞಾನ ಹಾಗೂ ವಿಜ್ಞಾನ ವಿಭಾಗದ ಡೀನ್ ಡಾ. ನಿಶಾತ ಆರೀಫ್ ಹುಸೇನಿ, ವೈದ್ಯಕೀಯ ನಿಕಾಯದ ಡೀನ ಡಾ. ಸಿದ್ದೇಶ್ ಮತ್ತು ಇಂಜಿನಿಯರಿಂಗ ನಿಕಾಯದ ಡೀನ ಪ್ರೊ. ಅಜಮ ಮತ್ತಿತರರು ಹಾಜರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

14 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

17 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

20 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 hour ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago