ಪ್ರಿಯಾಂಕ್ ಖರ್ಗೆಗೆ ಉಸ್ತುವಾರಿ ವಹಿಸಲು ಮನವಿ

0
369

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಎಂ. ಖರ್ಗೆ ಅವರನ್ನು ಕಲಬುರಗಿ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಿಸಬೇಕು ಎಂದು ಸುಂದರರಾಷ್ಟ್ರ ಅಭಿವೃದ್ಧಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸಂಜೀವಕುಮಾರ ಕಾಂಬಳೆ ಮನವಿ ಮಾಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಾಗೂ ಪಕ್ಷದ ಅಧ್ಯಕ್ಷರೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಪತ್ರ ಬರೆದಿರುವ ಅವರು, ಪ್ರಿಯಾಂಕ್ ಖರ್ಗೆ ಅವರು ದಕ್ಷ ಹಾಗೂ ಪ್ರಾಮಾಣಿಕರಾಗಿದ್ದು, ಇಂಥವರಿಂದ ಜಿಲ್ಲೆಯ ಪ್ರಗತಿ ಸಾಧ್ಯವಿದ್ದು, ಅವರನ್ನು ಕಲಬುರಗಿ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಿಸಬೇಕು ಎಂದು ತಿಳಿದಿದ್ದಾರೆ.

ಪಾಲು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here