ಕೆಕೆಆರ್ಡಿಬಿಯಲ್ಲಿ 3000 ಕೋಟಿ ಅನುದಾನ ದುರ್ಬಳಕೆಯ ತನಿಖೆಗೆ ಶಾಸಕ ಅಲ್ಲಂಪ್ರಭು ಪಾಟೀಲ್ ಸ್ವಾಗತ

ಕಲಬುರಗಿ: ಬಿಜೆಪಿ ಅಧಿಕಾರ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ 3000 ಕೋಟಿ ರುಪಾಯಿಗೂ ಹೆಚ್ಚಿನ ಅನುದಾನ ದುರ್ಬಳಕೆ ಪ್ರಕರಣದ ಸಮಗ್ರ ತನಿಖೆಗೆ ಆದೇಶ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಕಲಬುರಗಿ ದಕ್ಷಿಣ ಶಾಸಕ ಅಲ್ಲಂಪ್ರಭು ಪಾಟೀಲ್ ಸ್ವಾಗತಿಸಿದ್ದಾರೆ.

ಈ ಕುರಿತಂತೆ ಹೇಳಿಕೆ ನೀಡಿರುವ ಅವರು ಕೆಕೆಆರ್‍ಡಿಬಿ 3 ಸಾವಿರ ಕೋಟಿ ರು ಅನುದಾ ಬಳಕೆಯಲ್ಲಿ, ಕಕ ಮಾನವಾಭಿವೃದ್ಧಿ ಸಂಘದ ಅನುದಾನ ಬಳಕೆಯಲ್ಲಿ ಭಾರಿ ಅಕ್ರಮ, ಸ್ವಜನ ಪಕ್ಷಪಾತ, ಅಧಿಕಾರ ದುರ್ಬಳಕೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‍ಸಚಿವ ಪ್ರಿಯಾಂಕ್ ಖರ್ಗೆ ಬರೆದ ಪತ್ರದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ತಕ್ಷಣ ಹಗರಣದ ಸಮಗ್ರ ತನಿಖೆಗೆ ಆದೇಶ ಮಾಡಿರೋದು ಸರಿಯಾಗಿದೆ.

ಹಗರಣದಲ್ಲಿ ಹಿಂದುಳಿದ ಬಾಗಕ್ಕೆ ದಕ್ಕಬೇಕಿದ್ದ ಸಾವಿರಾರು ಕೋಟಿ ರುಪಾಯಿ ಯಾರ್ಯಾರದ್ದೋ ಪಾಲಾಗಿದೆ. ಇದನ್ನು ನಾವು ಖಂಡಿಸಲೇಬೇಕು. ತನಿಖೆಯಿಂದ  ಹಿಂದುಳಿದ ಪ್ರದೇಶದ ಪ್ರಗತಿಗೆ ಒದಗಬೇಕಿದ್ದ ಹಣ ಹೇಗೆ ದುರ್ಬಳಕೆಯಾಗಿದೆ ಎಂಬುದು ಗೊತ್ತಾಗಲಿದೆ. ತಪ್ಪಿತಸ್ಥರು ಯಾರು ಎಂಬುದು ಹೊರಬಂದು ಅವರಿಗೆ ಕಾನೂನು ರೀತ್ಯಾ ಕಠಿಣ ಶಿಕ್ಷೆಯಾಗಲಿ. ಉಭಯ ಸಂಸ್ಥೆಗಳ ಹಿಂದಿನ ಅಧ್ಯಕ್ಷರು, ಕಾರ್ಯದರ್ಶಿಗಳೇ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಬಲವಾದ ಶಂಕೆಗಳಿರೋದರಿಂದ ಸರ್ಕಾರ ಆದಷ್ಟು ಬೇಗ ತನಿಖೆ ನಡೆಸಿ ಹಕೀಕತ್ತನ್ನು ಹೊರಗೆ ಎಳೆಯುವಂತಾಗಲಿ ಎಂದು ಶಾಸಕ ಅಲ್ಲಂಪ್ರಭು ಪಾಟೀಲ್ ಹೇಳಿದ್ದಾರೆ.

ಕೆಕೆಆರ್ಡಿಬಿ ಹಾಗೂ ಕಕ ಮಾನವಾಭಿವೃದ್ಧಿ ಸಂಘದಲ್ಲಿನ ಅಕ್ರಮಗಳು, ಕಾನೂನು ಉಲ್ಲಂಘನೆಯ ಪ್ರಕರಣಗಳನ್ನು ಸಿಎಜಿ ತನ್ನ ವರದಿಯಲ್ಲೂ ಸ್ಪಷ್ಟವಾಗಿ ನಮೂದಿಸಿದೆ.  ಜನರ ತೆರಿಗೆ ಹಣ ಹೀಗೆ ಹಗರಣದಲ್ಲಿ ಕಳೆದು ಹೋಗೋದು ಅದೆಷ್ಟು ಸರಿ? ತನಿಖೆ ನಡೆದು ತಪ್ಪಿತಸ್ಥರ ಸಮೇತ ವರದಿ ಹೊರಬರಲಿ. ಸರ್ಕಾರ ತಕ್ಷಣ ತಪ್ಪಿತಸ್ಥರಿಗೆ ಶಕ್ಷೆ ವಿಧಿಸಲಿ. ಸದರಿ ಹಗರಣದ ತನಿಖೆಯಾಗುವಂತೆ ನೋಡಿಕೊಂಡಿರುವ ಸಚಿವರಾದ ಪ್ರಿಯಾಂಕ್ ಖರ್ಗೆಯವರ ಜನಪರ, ಹಿಂದುಳಿದ ನೆಲದ ಪ್ರಗತಿಯಾಗಬೇಕು ಎಂಬ ಕಾಳಜಿ, ಕಳಕಳಿಗೆ ನಾವು ಸದಾ ಋಣಿ. ಅನುದಾನ ಲೂಟಿಕೋರರ ಪಾಲಾಗದೆ ಈ ನೆಲದ ಪ್ರಗತಿಗೆ ಒದಗಲೇಬೇಕು. ಈ ವಿಚಾರದಲ್ಲಿ ಶಾಸಕರೆಲ್ಲರೂ ಪ್ರಿಯಾಂಕ್ ಅವರ ಜೊತೆಗರೋದಾಗಿಯೂ ಅಲ್ಲಂಪ್ರಭು ಪಾಟೀಲ್ ಹೇಳಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420