ಜಿಲ್ಲಾ ಕೊಳಗೇರಿ ನಿವಾಸಿಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ

ಕಲಬುರಗಿ: ಕುಸ್ತಿ ಪಟುಗಳ ಮೇಲೆ ದೆಹಲಿ ಪೆÇೀಲಿಸರ ವರ್ತನೆಯನ್ನು ಖಂಡಿಸಿ ಹಾಗೂ ಘನವೆತ್ತ ರಾಷ್ಟ್ರಪತಿಗಳು ಕೂಡಲೇ ಮಧ್ಯ ಪ್ರವೇಶಿಸಬೇಕೆಂದು ಕಲಬುರಗಿ ಜಿಲ್ಲಾ ಕೊಳಗೇರಿ ನಿವಾಸಿಗಳ ಒಕ್ಕೂಟ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಶ್ರೀ ಘನವೆತ್ತ ರಾಷ್ಟ್ರಪತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ನವ ದೆಹಲಿಯಲ್ಲಿ ಭಾನುವಾರ ಈ ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ, ಉದ್ಘಾಟನೆಗೊಂಡ ನೂತನ ಸಂಸತ್ ಭವನದ ಹೊರಗಡೆ ಪ್ರತಿಭಟನೆ ನಡೆಸಲು ತೆರಳುತ್ತಿದ್ದ, ಕುಸ್ತಿ ಪಟುಗಳನ್ನು ದೆಹಲಿ ಪೆÇೀಲಿಸರು ವಶಕೆ ಪಡೆದಿದ್ದಾರೆ. ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಭಾರತೀಯ ಕುಸ್ತಿ ಫೇಡ್ರೆಶನ್ ಅಧ್ಯಕ್ಷ ಬ್ರಿಜ್‍ಭೂಷಣಸಿಂಗ್ ವಿರುದ್ಧ ಕೆಲ ದಿನಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದ, ಕುಸ್ತಿ ಪಟುಗಳು ಭಾನುವಾರ ಮಹಿಳಾ ಸನ್ಮಾನ್ ಮಹಾ ಪಂಚಾಯತಿಗೆ ಕರೆ ನೀಡಿದರು. ಇದರ ಭಾಗವಾಗಿ ಹೊಸ ಸಂಸತ್ ಭವನದ ಮುಂದೆ ಪ್ರತಿಭಟಿಸಿಲು ಯೋಜಿಸಿದ್ದು, ಅದಕ್ಕಾಗಿ ಮೇರವಣಿಗೆ ಹೊರಟಿದ್ದರು, ಕುಸ್ತಿ ಪಟುಗಳಾದ ವಿನೇಶ್ ಫೆÇೀಗಟ್, ಸಾಕ್ಷಿಮಲೀಕ್, ಭರಂಗ್‍ಫುನಿಯಾ ಮೇರವಣಿಗೆಯ ನೇತೃತ್ವ ವಹಿಸಿದ್ದರು.

ಬ್ಯಾರಿಕೆಡ್ ಹಾಕಿ ಕುಸ್ತಿ ಪಟುಗಳನ್ನು ತಡೆಯಲು ಪೆÇೀಲಿಸರು ಮುಂದಾದರು. ಈ ವೇಳೆ ಕುಸ್ತಿಪಟುಗಳ ಮೇಲೆ ಹಲ್ಲೆ ನಡೆಸಿದ ಪೆÇೀಲಿಸರು ಪ್ರತಿಭಟನಾ ಕಾರರನ್ನು ವಶಕ್ಕೆ ಪಡೆದಿರುವುದು ಅತ್ಯಂತ ನೋವಿನ ಸಂಗತಿ ಜೋತೆಗೆ ಹೋರಾಟಗಾರರ ಮೇಲೆ ನಡೆಸುವ ದಬ್ಬಾಳಿಕೆಯಾಗಿದೆ ಎಂದು ಸ್ಲಂ ಜನಾಂದೋಲನ ಕರ್ನಾಟಕ ಕಲಬುರಗಿ ಜಿಲ್ಲಾ ಘಟಕವು ಖಂಡಿಸುತ್ತದೆ.

ತಮ್ಮ ದೌರ್ಜನ್ಯ ನಡೆಸಿರುವುದಾಗಿ ಆರೋಪಿಸಿರುವ ಕುಸ್ತಿ ಪಟು ಸಾಕ್ಷಿ ಮಲೀಕ್ ಕೆಲವು ಚಿತ್ರಗಳನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಯಾವುದೇ ಸರಕಾರ ತಮ್ಮ ದೇಶದ ಚಾಂಪಿಯನ್‍ಗಳನ್ನು ಈ ರೀತಿ ನಡೆಸಿಕೊಳ್ಳುತ್ತದೆಯೇ ಎಂದು ಪ್ರಶ್ನಿಸುವುದರ ಮೂಲಕ ನಾವು ಏನು ಅಪರಾಧ ಮಾಡಿದ್ದೀವಿ ಎಂದು ಪ್ರಶ್ನಿಸಿದ್ದಾರೆ.

ಕೆಲ ದಿನಗಳ ಹಿಂದೆಯು ಪ್ರತಿಭಟನಾ ನೀರತ ಕುಸ್ತಿ ಪಟುಗಳ ಮೇಲೆ ಪೆÇೀಲಿಸರು ಹಲ್ಲೆ ನಡೆಸಿದ್ದರು, ಸಧ್ಯ ಕುಸ್ತಿ ಪಟುಗಳ ಮೇಲಿನ ದೌರ್ಜನ್ಯವು ಸಂಘಟನೆಯು ಖಂಡಿಸುತ್ತದೆ.

ಪ್ರತಿಭಟನಾ ನೀರತ ಕುಸ್ತಿ ಪಟುಗಳು ನಮ್ಮ ದೇಶದ ಆಸ್ತಿ ಮತ್ತು ಗೌರವವಾಗಿದ್ದು, ಅದನ್ನು ನಾವುಗಳು ಮರೆಯ ಬಾರದು ಅಲ್ಲದೇ ಅವರಿಗೆ ಈ ರೀತಿ ಸರಕಾರ ನಡೆಸಿಕೊಳ್ಳುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ಕೂಡಲೇ ಕುಸ್ತಿ ಪಟುಗಳ ಬೇಡಿಕೆಗಳ ಈಡೇರಿಕೆಗೆ ಘನವೆತ್ತ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಅವರಿಗೆ ನ್ಯಾಯ ಒದಗಿಸಬೇಕೆಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಒಕ್ಕೂಟದ ಗೌರವಾಧ್ಯಕ್ಷ ಬಾಬುರಾವ ದಂಡಿನಕರ್, ಅಧ್ಯಕ್ಷ ಅಲ್ಲಮಪ್ರಭು ನಿಂಬರ್ಗಾ, ಕಾರ್ಯದರ್ಶಿ ವಿಕಾಸ್ ಸವಾರಿಕರ್, ಸಹ ಕಾರ್ಯದರ್ಶಿ ಬ್ರಹ್ಮಾನಂದ ಮಿಂಚಾ, ಉಪಾಧ್ಯಕ್ಷ ಅನೀಲ ಚಕ್ರ, ಮುಖಂಡರಾದ ಯಮನಪ್ಪ ಪ್ರಸಾದ್, ಗಣೇಶ ಕಾಂಬಳೆ, ಯೇಸುರಾಜ, ಅಶೋಕ ರಾಠೋಡ, ಮಲ್ಲಿಕಾರ್ಜುನ ಕಾಂಬಳೆ, ಸಿದ್ರಾಮ ತಿರ್ಮಾನ್ ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420