ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0
25

ಸೇಡಂ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ನಾವೆಲ್ಲರೂ ಸಸಿ ನಡುವ ಮೂಲಕ ಪರಿಸರವನ್ನು ಕಾಪಾಡಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಹಾಳು ಮಾಡದಂತೆ ಕಾಪಾಡಬೇಕು. ಗಿಡಿಮರಗಳನ್ನು ಬೆಳೆಸಿದರೆ ಮಾನವ ಕುಲ ಉಳಿಯುತ್ತದೆ ಎಂದು ಸೇಡಂ ನಗರದ ಅನಘ್ರ್ಯ ರತ್ನ ಫೌಂಡೇಷನ್ ನ ಲಿಟಲ್ ಆರ್ಛಿಡ್ ಅಂತರಾಷ್ಟ್ರೀಯ ಶಾಲೆಯ ಮುಖ್ಯಸ್ಥೆ ಉಷಾದೇವಿ ಅಭಿಪ್ರಾಯ ಪಟ್ಟರು. ಅವರು ಇಂದು ವಿಶ್ವ ಪರಿಸರ ದಿನಾಚರಣೆ ನಿಮಿತ್ಯ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಶಾಲೆಯ ಶಿಕ್ಷಕರು ಸೇರಿ ಸಸಿ ನಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಪಾಲಕರು ಮಕ್ಕಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here