ಸುರಪುರ: ರಾಜ್ಯದಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಯ ಪರಿಹಾರಕ್ಕೆ ಸಹಕರಿಸುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಮುಖಂಡರು ಮನವಿ ಸಲ್ಲಿಸಿ ವಿನಂತಿಸಿದರು.
ನಗರದ ಶಾಸಕರ ಕಚೇರಿಯಲ್ಲಿ ಶಾಸಕರನ್ನು ಭೇಟಿ ಮಾಡಿದ ಒಕ್ಕೂಟದ ಮುಖಂಡರು ಮನವಿ ಸಲ್ಲಿಸಿ ಮಾತನಾಡಿ,ಖಾಸಗಿ ಶಿಕ್ಷಣ ಸಂಸ್ಥೆಗಳು ಇಂದು ತುಂಬಾ ಸಂಕಷ್ಟ ಹೆದುರಿಸುತ್ತಿವೆ,1995 ರ ನಂತರ ಕನ್ನಡ ಮಾಧ್ಯಮದ ಶಾಲಾ ಕಾಲೇಜುಗಳು ವೇತನ ಅನುದಾನಕ್ಕೆ ಒಳಪಡಿಸುವ ಕುರಿತು ಮತ್ತು ಶಿಕ್ಷಣ ಹಕ್ಕು ಕಾಯ್ದೆ(ಆರ್.ಟಿ.ಇ) ಮರು ಜಾರಿಗೊಳಿಸಲು ಸರಕಾರಕ್ಕೆ ತಾವುಗಳು ಮನವಿ ಮಾಡಬೇಕು ಅಲ್ಲದೆ ಕಳೆದ 28 ವರ್ಷಗಳಿಂದ ಅತ್ಯಂತ ಕಡಿಮೆ ಸಂಬಳದಲ್ಲಿ ಗೌರವಯುತವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಸ್ಥಿತಿ ಶೋಚನಿಯವಾಗಿದೆ,ಆದ್ದರಿಂದ ಸರಕಾರ 1995ರ ನಂತರದ ಎಲ್ಲಾ ಶಾಲಾ ಕಾಲೇಜುಗಳನ್ನು ವೇತನನುದಾನಕ್ಕೆ ಒಳಪಡಿಸಬೇಕು,ಶಿಕ್ಷಣ ಹಕ್ಕು ಕಾಯ್ದೆ ಮರು ಜಾರಿಗೊಳಿಸಿ ಬಡವರ ಮಕ್ಕಳು ಉತ್ತಮವಾದ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಲು ಅನುಕೂಲ ಮಾಡಿಕೊಡಬೇಕು ಮತ್ತು 28 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಸರಕಾರ ವೇತನ ನೀಡಬೇಕು ಎಂದು ಸರಕಾರಕ್ಕೆ ಒತ್ತಾಯ ಮಾಡುವಂತೆ ವಿನಂತಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು,ತಮ್ಮ ಮನವಿಯನ್ನು ಶಿಕ್ಷಣ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಬೇಡಿಕೆ ಈಡೇರಿಕೆಗೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಒಕ್ಕೂಟದ ರಾಜ್ಯ ಗೌರವಾಧ್ಯಕ್ಷ ಹಾಗೂ ನಿವೃತ್ತ ಲೋಕಾಯುಕ್ತ ಎಸ್ಪಿ ಚಂದ್ರಕಾಂತ ಭಂಡಾರೆ,ಒಕ್ಕೂಟದ ತಾಲೂಕು ಅಧ್ಯಕ್ಷ ಕೃಷ್ಣ ದರಬಾರಿ,ಪ್ರಧಾನ ಕಾರ್ಯದರ್ಶಿ ಮೊನಪ್ಪ ಕಳಸರ,ನಿಂಗಣ್ಣ ಬುಡ್ಡಾ,ತಿರುಪತಿ ಶೆಟ್ಟಿ,ಅಂಬರೇಶ ಕಾನಗುಂಡಿ,ಸಾಹಿತಿ ಶ್ರೀನಿವಾಸ ಜಾಲವಾದಿ,ರಂಗಣ್ಣಗೌಡ ಪಾಟೀಲ್,ರಾಘವೇಂದ್ರ ಭಕ್ರಿ,ನಿಂಗಪ್ಪ ಎಮ್.ಎಮ್ ದೊಡ್ಡಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…