ಕಲಬುರಗಿ: ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಕಲಬುರಗಿ ಉಪ ರಾಜಧಾನಿ ಮಾಡುವಂತೆ ಹಾಗೂ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಜಿಲ್ಲಾ ಉಸ್ತುವಾರಿ ವಹಿಸಿ ಮತ್ತು ಇನ್ನೋರ್ವ ಸಚಿವ ಶರಣಪ್ರಕಾಶ ಪಾಟೀಲರನ್ನು ಕೆಕೆಆರ್ ಡಿಬಿ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಲ್ಯಾಣ ಭಾಗದ ಅಭಿವೃದ್ಧಿಗೆ ಪೂರಕವಾದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಈ ಹಿಂದೆ ಶರಣಪ್ರಕಾಶ ಪಾಟೀಲ ಅವರು ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವ ಅನುಭವವಿದೆ.ಅನೇಕ ಯೋಜನೆಗಳನ್ನು ಕೈಗೊಂಡಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕೆಕೆಆರ್ ಡಿಬಿಗೆ 5 ಸಾವಿರ ಕೋಟಿ ರೂಪಾಯಿ ಅನುದಾನ ನೀಡುವ ಕುರಿತು ಭರವಸೆ ನೀಡಲಾಗಿದೆ.
ಸಚಿವ ಶರಣಪ್ರಕಾಶ ಪಾಟೀಲ ಅವರು ಅಧ್ಯಕ್ಷರಾದರೆ ಅನುದಾನ ಪ್ರಾಮಾಣಿಕವಾಗಿ ಸದ್ಭಳಕೆಯಾಗಿ ಈ ಭಾಗ ಅಭಿವೃದ್ಧಿ ಹೊಂದುತ್ತದೆ ಎಂದ ಅವರು ಜಿಲ್ಲೆಯ ಯುವ ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ ಜಿಲ್ಲಾ ಉಸ್ತುವಾರಿ ಹೊಣೆ ನೀಡಬೇಕು.ಅದರಂತೆ ಪ್ರೀಯಾಂಕ ಖರ್ಗೆ ಅವರು ಕಾಳಜಿ ವಹಿಸಿ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಕಲಬುರಗಿ ಉಪ ರಾಜಧಾನಿ ಮಾಡಿದರೆ ಕಚೇರಿಯ ಕೆಲಸಕ್ಕಾಗಿ ಈ ಭಾಗದ ಜನರು ದೂರದ ಬೆಂಗಳೂರಿಗೆ ತೆರಳಲು ತಪ್ಪುತ್ತದೆ.ಇದರಿಂದ ಸಮಯವೂ ಹಾಗೂ ಹಣ ಉಳಿತಾಯವಾಗುತ್ತದೆ.ಅಲ್ಲದೆ ರಾಜಧಾನಿಯಾದರೆ ಕಲಬುರ್ಗಿಯಲ್ಲಿ ಉಪ ಕಚೇರಿಗಳು ಸ್ಥಾಪನೆಯಾಗುತ್ತವೆ. ಇದರಿಂದ ಇಲ್ಲಿಯ ಜನರಿಗೆ ಅನುಕೂಲವಾಗುತ್ತದೆ.371ನೇ ಜೆ ಕಲಂ ಅನುಷ್ಠಾನಕ್ಕೆ ಕಲಬುರಗಿಯಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀಕುಟುಂಬಕ್ಕೆ ಒಂದೆಡೆ ದುಃಖ, ತಳವಳ, ಕಳವಳ, ಸಂಕಟ, ಮತ್ತೊಂದೆಡೆಸಂತಸ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…