ಸುರಪುರ: ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಕಳೆದ ಅನೇಕ ವರ್ಷಗಳಿಂದ ಉಳಿಮೆ ಮಾಡಿಕೊಂಡು ಬರುತ್ತಿರುವ ದಲಿತ ಸಮುದಾಯದ ಕುಟುಂಬಸ್ಥರ ಜಮೀನನ್ನು ಗ್ರಾಮದಲ್ಲಿನ ಮೇಲ್ವರ್ಗದ ವ್ಯಕ್ತಿ ಕಬಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಗರದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿದೆ.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘದ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ,ಬಾದ್ಯಾಪುರ ಗ್ರಾಮದಲ್ಲಿ ಸರ್ವೇ ನಂಬರ್ 86ರ ಪಹಣಿಯಲ್ಲಿ ಮಾದಿಗ ಸಮುದಾಯದ ಭೀಮಪ್ಪ ತಾಯಿ ದ್ಯಾವಮ್ಮ ಎನ್ನುವವರಿಗೆ ಸೇರಿದ ಭೂಮಿ ಇದ್ದು,ಈ ಕುಟುಂಬ ಕಳೆದ ಅನೇಕ ವರ್ಷಗಳಿಂದ ಬಾಂಬೆಗೆ ಗುಳೆ ಹೋಗಿದ್ದು ಈಗ ಬರುವಷ್ಟರಲ್ಲಿ ಮಾಜಿ ಸೈನಿಕ ತಿಪ್ಪಣ್ಣ ಶರಣಪ್ಪ ಎನ್ನುವವರಿಗೆ ನಾಲ್ಕು ಎಕರೆ ಹಾಗೂ ದೇವಿಕೇರಾ ಗ್ರಾಮ ಪಂಚಾಯತಿಯ ಕಸ ವಿಲೇವಾರಿಗೆ ಎರಡು ಎರಕೆ ಕಬಳಿಕೆ ಮಾಡಲಾಗಿದೆ.ಆದ್ದರಿಂದ ದಲಿತ ಕುಟುಂಬಕ್ಕೆ ಸೇರಿದ ಭೂಮಿ ಕಬಳಿಕೆ ಮಾಡಿದವರ ವಿರುದ್ಧ ಕ್ರಮ ಕೈಗೊಂಡು ದಲಿತ ಕುಟುಂಬಕ್ಕೆ ಭೂಮಿ ಮರಳಿ ನೀಡಬೇಕು,ಇಲ್ಲವಾದಲ್ಲಿ ಸಂಘಟನೆಯಿಂದ ತಹಸೀಲ್ದಾರ್ ಕಚೇರಿಗೆ ಮುಳ್ಳು ಬೇಲಿ ಹಚ್ಚಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ನಂತರ ತಹಸೀಲ್ದಾರರಿಗೆ ಬರೆದ ಮನವಿಯನ್ನು ಸಿರಸ್ತೆದಾರರ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಯಲ್ಲಪ್ಪ ಚಿನ್ನಾಕಾರ,ಬಸವರಾಜ ದೊಡ್ಮನಿ,ಜಟ್ಟೆಪ್ಪ ನಾಗರಾಳ,ಖಾಜಾಹುಸೇನ ಗುಡಗುಂಟಿ,ಮಹೇಶ ಯಾದಗಿರಿ ಸೇರಿದಂತೆ ಜಮೀನಿನ ಕುಟುಂಬಸ್ಥರು ಭಾಗವಹಿಸಿದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…