ಸುರಪುರ:ನಗರದ ರಂಗಂಪೇಟೆಯ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ ಮತ್ತು ಹಿರಿಯ ವರ್ತಕರಾಗಿದ್ದ ಇತ್ತೀಚೆಗೆ ಲಿಂಗೈಕ್ಯರಾದ ಭೀಮಣ್ಣ ಆರ್.ಅವಂಟಿಯವರಿಗೆ ರಂಗಂಪೇಟೆಯ ಕನ್ನಡ ಸಾಹಿತ್ಯ ಸಂಘದಿಂದ ನುಡಿ ನಮನ ಕಾರ್ಯಕ್ರಮ ನಡೆಸಲಾಯಿತು.
ರಂಗಂಪೇಟೆಯ ಕನ್ನಡ ಸಾಹಿತ್ಯ ಸಂಘದ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೊದಲಿಗೆ ಭೀಮಣ್ಣ ಅವಂಟಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ನಂತರ ಎರಡು ನಿಮಿಷಗಳ ಮೌನಾಚರಣೆ ಮಾಡಿ ಗೌರವ ವಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ,ಭೀಮಣ್ಣ ಅವಂಟಿಯವರು ಒಬ್ಬ ಶಿಕ್ಷಣ ಪ್ರೇಮಿಯಾಗಿದ್ದರು,ಅಲ್ಲದೆ ಅವರು ಅನೇಕರಿಗೆ ಸಹಾಯ ಸಹಕಾರ ನೀಡುವ ಮೂಲಕ ಮತ್ತೊಬ್ಬರ ಏಳಿಗೆಗೆ ಹಂಬಲಿಸುವ ವ್ಯಕ್ತಿಯಾಗಿದ್ದರು,ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಮೂಲಕ ಅನೇಕ ಮಕ್ಕಳಿಗೆ ಅಕ್ಷರ ಜ್ಞಾನಕ್ಕೆ ದಾರಿ ಮಾಡಿಕೊಟ್ಟಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸೂಗುರೇಶ ವಾರದ,ಹಿರಿಯ ಸಾಹಿತಿಗಳಾದ ಶಾಂತಪ್ಪ ಬೂದಿಹಾಳ,ಭೀಮಣ್ಣ ರತ್ತಾಳ,ನಿವೃತ್ತ ಲೋಕಾಯುಕ್ತ ಎಸ್ಪಿ ಚಂದ್ರಕಾಂತ ಭಂಡಾರೆ,ಮೌನೇಶ ನಾಲವಾರ,ಪ್ರಕಾಶ ಸಜ್ಜನ್,ಶಿವರಾಜಪ್ಪ ಗೋಲಗೇರಿ,ಮಲ್ಲಿಕಾರ್ಜುನ ಸತ್ಯಂಪೇಟೆ,ಶ್ರೀನಿವಾಸ ಜಾಲವಾದಿ,ಜನಾರ್ಧನರಾವ್ ಪಾಣಿಭಾತೆ,ಈಶ್ವರ ಮಾಲಿ ಪಾಟೀಲ್,ಚನ್ನಮಲ್ಲಿಕಾರ್ಜುನ ಗುಂಡಾನೂರ,ಶರಣು ಅರಕೇರಿ,ಪ್ರಕಾಶ ಅಲಬನೂರ, ಮೋಹನ ತ್ರಿವೇದಿ,ಗಂಗಾಧರ ರುಮಾಲ,ರಾಘವೇಂದ್ರ ಭಕ್ರಿ,ವಿನೋದ ಅವಂಟಿ ಸೇರಿದಂತೆ ಭೀಮಣ್ಣ ಅವಂಟಿಯವರ ಕುಟುಂಬಸ್ಥರು ಭಾಗವಹಿಸಿದ್ದರು.
ಕಲಬುರಗಿ: ಉಳ್ಳವರು ಸಹ ಸರ್ಕಾರಿ ಸೌಲಭ್ಯ ಪಡೆಯಲು ಬಿ.ಪಿ.ಎಲ್ ಪಡಿತರ ಚೀಟಿ ಪಡೆದಿರುವ ಸಾಧ್ಯತೆ ಇದ್ದು, ಕೂಡಲೆ ಇಂತಹ ಅನರ್ಹ…
ಶಹಾಬಾದ: ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಂಬಾರ ಸಮಾಜದ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ನೀಡುವ ಮೂಲಕ ಕಲಬುರಗಿ…
ಶಹಬಾದ: ಪರಿಸರ ಮಾಲಿನ್ಯ ಉಂಟು ಮಾಡುವ ಇಂಧನಗಳ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿಯಾಗುವ ಪರ್ಯಾಯ ಇಂಧನಗಳ ಬಳಕೆ ಮಾಡಿದಲ್ಲಿ…
ಬಸವಾದಿ ಶರಣರ ರಚನೆಯ ವಚನ ಎನ್ನುವುದು ಬಹಳ ಮೌಲಿಕವಾದ ನುಡಿ. 'ವ' ಎಂಬ ಸೂತ್ರವನ್ನು ಬಿಡಿಸುವುದಾದರೆ, ವ ಎಂಬ ಮೊದಲ…
ಕಲಬುರಗಿ: ಭಾರತ ಅನೇಕ ಜಾತಿ, ಧರ್ಮಗಳಿಂದ ಕೂಡಿದ್ದ ದೇಶವಾಗಿದ್ದು, ಹಬ್ಬ, ಜಾತ್ರೆ, ಉತ್ಸವಗಳು ಪರಸ್ಪರ ಬೆಸೆಯುತ್ತವೆ. ತ್ಯಾಗ, ಭಾವೈಕ್ಯತೆಯ ಸಂಕೇತವಾಗಿ…
ಕಲಬುರಗಿ: ನಗರ ಹೊರವಲಯದ ತಾಜಸುಲ್ತಾನಪುರ ಗ್ರಾಮದ ಕೆಎಸ್ ಆರ್ ಪಿ ಸರಕಾರ ಪ್ರೌಢ ಶಾಲೆ ಕೆ. ಎಸ್. ಆರ್. ಪಿ…