ಬಿಸಿ ಬಿಸಿ ಸುದ್ದಿ

ಜ್ಞಾನ ಸಂಭ್ರಮ ವಿಶೇಷ ಕಾರ್ಯಕ್ರಮದಲ್ಲಿ ಪುಸ್ತಕ ವಿತರಣೆ

ಆಳಂದ: ಇತ್ತೀಚಿಗೆ ಅನೇಕ ಸಭೆ-ಕಾರ್ಯಕ್ರಮಗಳಲ್ಲಿ ದುಂದು ವೆಚ್ಚ ಹೆಚ್ಚಾಗುತ್ತಿದೆ. ಬೇರೆ ವಸ್ತುಗಳನ್ನು ಕಾಣಿಗೆಯಾಗಿ ನೀಡುವ ಬದಲು ಉತ್ತಮ ಗ್ರಂಥಗಳನ್ನು ನೀಡಬೇಕು. ವ್ಯಕ್ತಿಯ ಜೀವನದ ದಿಕ್ಕನ್ನೇ ಬದಲಿಸುವ ಶಕ್ತಿ ಪುಸ್ತಕಗಳಿಗಿದ್ದು, ಸಾಧನೆಯ ದಾರಿಯನ್ನು ತಿಳಿಸುವ ಮೂಲಕ ಶ್ರೇಷ್ಠ ವ್ಯಕ್ತಿತ್ವ ನಿರ್ಮಾಣ ಮಾಡುತ್ತವೆ ಎಂದು ಕೆಎಚ್‍ಬಿ ಗ್ರೀನ್ ಪಾರ್ಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಂಜೀವಕುಮಾರ ಶೆಟ್ಟಿ ಹೇಳಿದರು.

ತಾಲೂಕಿನ ಗುಂಜ ಬಬಲಾದ ಗ್ರಾಮದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಏರ್ಪಡಿಸಲಾಗಿದ್ದ ‘ಜ್ಞಾನ ಸಂಭ್ರಮ’ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಜ್ಞಾನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಂಗಮೇಶ್ವರ ಸರಡಗಿ, ನ್ಯಾಯವಾದಿ ಹಣಮಂತರಾಯ ಎಸ್.ಅಟ್ಟೂರ್ ಮಾತನಾಡಿ, ಬಸವೇಶ್ವರ ಸಮಾಜ ಸೇವಾ ಬಳದ ಎಚ್.ಬಿ.ಪಾಟೀಲ ಅವರ ಮದುವೆ ವಾರ್ಷಿಕೋತ್ಸವ ಮತ್ತು ಪುತ್ರನ ಜನ್ಮದಿನಾಚರಣೆ ಪ್ರಯುಕ್ತ ಆಗಮಿಸಿದ್ದ ಎಲ್ಲರಿಗೆ ಶರಣರು, ಸಂತರು, ಮಹನೀಯರು, ಸ್ವಾತಂತ್ರ್ಯ ಹೋರಾಟಗಾರರು, ಆರೋಗ್ಯ, ಪರಿಸರ ಸೇರಿದಂತೆ ಅನೇಕ ಮಹತ್ವದ ಪುಸ್ತಕಗಳನ್ನು ಉಚಿತವಾಗಿ ನೀಡುವ ಮೂಲಕ ಓದುವ ಅಭಿರುಚಿ ಬೆಳೆಸಬೇಕು ಎಂಬ ಅವರ ಕಳಕಳಿ ಇತರರಿಗೆ ಮಾದರಿಯಾಗಿದೆ ಎಂದರು.

ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ. ಸುನೀಲಕುಮಾರ ಎಚ್.ವಂಟಿ, ಕ.ರಾ.ಪ್ರಾ.ಶಾ.ಶಿ.ಸಂಘದ ಜಿಲ್ಲಾ ಉಪಾಧ್ಯಕ್ಷ ನೀಲಕಂಠಯ್ಯ ಹಿರೇಮಠ, ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯಸ್ವಾಮಿ ಹೊದಲೂರ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಯಶ್ರೀ ಎಚ್.ಬಿ.ಪಾಟೀಲ ಬಸವಭುವನ ಎಚ್. ಪಾಟೀಲ ಎಚ್.ಬಿ.ಪಾಟೀಲ, ಬಸವಶ್ರೀ, ವೀರಣ್ಣ ಲೊಡ್ಡೇನ್, ಶಿವಯೋಗಪ್ಪ ಬಿರಾದಾರ, ಪರಮೇಶ್ವರ ಬಿ.ದೇಸಾಯಿ, ದೇವೇಂದ್ರಪ್ಪ್ ಗಣಮುಖಿ, ಚಂದ್ರಕಾಂತ ಬಿರಾದಾರ, ಕೆ.ಬಸವರಾಜ, ಸೂರ್ಯಕಾಂತ ಸಾವಳಗಿ, ಬಾಲಕೃಷ್ಣ ಕುಲಕರ್ಣಿ, ಬಸವರಾಜ ಹೆಳವರ ಯಾಳಗಿ ಅನೇಕರು ಭಾಗವಹಿಸಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

50 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

53 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

56 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago