ಬಿಸಿ ಬಿಸಿ ಸುದ್ದಿ

ಕಸಾಪದಿಂದ ಸಾಹಿತ್ಯ ಸಂಸ್ಕøತಿ ಉತ್ಸವ

ಕಲಬುರಗಿ: ನಾವು ಎಷ್ಟು ಕನ್ನಡ ಬಳಸುತ್ತೇವೆಯೋ ಅಷ್ಟು ಉಳಿಸಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಅಭಿಮತ ವ್ಯಕ್ತಪಡಿಸಿದರು.

ನಗರದ ಕನ್ನಡಭವನದ ಸುವರ್ಣ ಸಭಾ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕ್ರಿಯಾಶೀಲ ಗೆಳೆಯರ ಬಳಗದ ಆಶ್ರಯದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀ¯ ತೇಗಲತಿಪ್ಪಿ ಜನ್ಮದಿನದ ನಿಮಿತ್ತ ಭಾನುವಾರ ಆಯೋಜಿಸಿದ್ದ ಸಾಹಿತ್ಯ ಸಂಸ್ಕøತಿ ಉತ್ಸವ-2023 ನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡದಲ್ಲಿ ಮಾತನಾಡುವ ಮೂಲಕ ಮಾತೃ ಭಾಷೆ ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ ಎಂದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ್ ತೇಗಲತಿಪ್ಪಿ ಅವರು ಕನ್ನಡ ಭಾಷೆ, ಜಲ, ನುಡಿ ಉಳಿಸಿ ಬೆಳಸುವಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಹಾಕಿಕೊಳ್ಳುತ್ತಿದ್ದಾರೆ. ತೇಗÀಲತಿಪ್ಪಿ ಅವರ ಕನ್ನಡಪರ ಕಾಳಜಿಗೆ ಶ್ಲಾಘನೀಯ ಎಂದರು.

ಸಾಮಾಜಿಕ, ಸಾಂಸ್ಕøತಿಕ ಮೌಲ್ಯಗಳ ಪುನರುತ್ಥಾನ ಕುರಿತು ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಉಪನ್ಯಾಸ ನೀಡಿ, ಸಾಹಿತ್ಯ ಎಂದರೆ ನುಡಿಯುವುದು, ಸಂಸ್ಕøತಿ ಎಂದರೆ ನಡೆಯುವುದು. ನುಡಿದಂತೆ ನಡೆದರೆ ಅದುವೆ ಸಾಹಿತ್ಯ ಸಂಸ್ಕøತಿ. ಸಾಹಿತ್ಯ ಮತ್ತು ಸಂಸ್ಕøತಿ ಮನುಷ್ಯನ ವ್ಯಕ್ತಿತ್ವಕ್ಕೆ ಪೂರಕವಾಗುತ್ತವೆ ಎಂದರು. ಸಂಪೂರ್ಣ ಹದಗೆಟ್ಟಿರುವ ಇಂದಿನ ಸಂದರ್ಭದಲ್ಲಿ ಸಮಾಜ ಸುಧಾರಿಸುವ ಗಟ್ಟಿ ಸಾಹಿತ್ಯ ರಚನೆ ಅಗತ್ಯವಾಗಿದೆ ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ನಮ್ಮ ಇಂದಿನ ಹೊಸ ಜನಾಂಗವು ನಮ್ಮ ಪರಂಪರೆಯ ವಾರಸುದಾರರಾಗಿ ಕನ್ನಡತನವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಅಂದಾಗ ಮಾತ್ರ ಕನ್ನಡ ಭಾಷೆ ಉಳಿಯುವುದಕ್ಕೆ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸರಕಾರಿ ಶಾಲೆಗಳ ಉಳಿಯುವಿಕೆ ಹಾಗೂ ಅವುಗಳ ಅಭಿವೃದ್ದಿಗಾಗಿ ಮುಂದಿನ ದಿನಗಳಲ್ಲಿ ಹೊಸ ಹೆಜ್ಜೆ ಇಡುತ್ತಿದೆ ಎಂದರು.

ಮುತ್ಯಾನ ಬಬಲಾದಿನ ಶ್ರೀ ಗುರುಪಾದಲಿಂಗ ಮಹಾಶಿವಯೋಗಿಗಳು ಸಾನ್ನಿಧ್ಯ ವಹಿಸಿದ್ದರು. ಲೇಖಕ ಡಾ. ಕೆ.ಗಿರಿಮಲ್ಲ ಅವರು ರಚಿಸಿದ `ವಿಜಯ ವಿಕಾಸ’ ಕೃತಿಯನ್ನು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ ಅವರು ಜನಾರ್ಪಣೆಗೊಳಿಸಿದರು. ಸಂಶೋಧಕ ಮುಡುಬಿ ಗುಂಡೇರಾವ, ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಯಶ್ವಂತರಾಯ ಅಷ್ಠಗಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಮಹಿಳಾ ಪ್ರತಿನಿಧಿಗಳಾದ ಶಕುಂತಲಾ ಪಾಟೀ¯ ಜಾವಳಿ, ಶಿಲ್ಪಾ ಜೋಶಿ, ನ್ಯಾಯವಾದಿ ಮಾಲತಿ ರೇಷ್ಮಿ, ಜ್ಯೋತ್ಸ್ನಾ ಹೇರೂರ ಮಾತನಾಡಿದರು.

ರಾಜುಗೌಡ ನಾಗನಳ್ಳಿ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಡಾ. ಬಾಬುರಾವ ಶೇರಿಕಾರ, ಸಿದ್ದಲಿಂಗ ರೆಡ್ಡಿ ಹಣಮನಳ್ಳಿ, ಎಂ.ಎಸ್.ಪಾಟೀಲ್ ನರಬೋಳಿ, ರಾಜೇಂದ್ರ ಮಾಡಬೂಳ, ವಿಶಾಲಾಕ್ಷಿ ಮಾಯಣ್ಣನವರ್, ಧರ್ಮಣ್ಣ ಹೆಚ್ ಧನ್ನಿ, ಸುನಿತಾ ದೊಡ್ಡಮನಿ, ಸಿದ್ದಲಿಂಗ ಬಾಳಿ, ಕಸಾಪದ ವಿವಿಧ ತಾಲೂಕಾಧ್ಯಕ್ಷರಾದ ಸುರೇಶ ದೇಶಪಾಂಡೆ, ಸಂತೋಷ ಕುಡಳ್ಳಿ, ನಾಗಪ್ಪ ಸಜ್ಜನ್, ಸುರೇಶ ಲೇಂಗಟಿ, ಶರಣಬಸಪ್ಪ ಕೋಬಾಳ, ಗುರುಬಸಪ್ಪ ಸಜ್ಜನಶೆಟ್ಟಿ, ವಿರೇಂದ್ರಕುಮಾರ ಕೊಲ್ಲೂರ, ಎಸ್ ಕೆ ಬಿರಾದಾರ, ಸುಮಾ ಚಿಮ್ಮನಚೋಡಕರ್, ಪ್ರಭು ಫುಲಾರಿ, ಉತ್ತರ ವಲಯದ ಅಧ್ಯಕ್ಷ ಪ್ರಭುಲಿಂಗ ಮೂಲಗೆ, ದಕ್ಷಿಣ ವಲಯದ ಅಧ್ಯಕ್ಷ ಶಾಮಸುಂದರ ಕುಲಕರ್ಣಿ, ಪ್ರಭವ ಪಟ್ಟಣಕರ, ಶಿವಾನಂದ ಪೂಜಾರಿ, ಬಸ್ವಂತರಾಯ ಕೋಳಕೂರ, ಬಾಬುರಾವ ಪಾಟೀಲ, ರಾಜಶೇಖರ ಚೌಧರಿ, ರವೀಂದ್ರಕುಮಾರ ಭಂಟನಳ್ಳಿ, ಸಿದ್ಧಾರಾಮ ಹಂಚನಾಳ, ರಾಜೇಂದ್ರ ಹೇರೂರ ಉಪಸ್ಥಿತರಿದ್ದರು.

ಹೆಚ್ಚು ಬಾರಿ ರಕ್ತ ದಾನ ಮಾಡಿ ಮತ್ತೊಬ್ಬರ ಜೀವ ಉಳಿಸಿದ ಮಹನೀಯರನ್ನು, ವಿವಿಧ ಕ್ಷೇತ್ರದ ಪ್ರಮುಖರು ಹಾಗೂ ಹತ್ತನೇ ಪರೀಕ್ಷೆಯ ನೂರಕ್ಕೆ ನೂರು ಪ್ರತಿಶತ ತಂದುಕೊಟ್ಟ ಮಕ್ಕಳನ್ನು ವಿಶೇಷವಾಗಿ ಗೌರವಿಸಲಾಯಿತು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

42 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

45 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

48 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago