ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿಗೆ ಅಭಿನಂದನೆ

0
48

ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರ 44ನೇ ಜನ್ಮದಿನದ ಪ್ರಯುಕ್ತ ನಗರದ ಕನ್ನಡ ಸುವರ್ಣ ಭವನದಲ್ಲಿ ಕಸಾಪ ಮತ್ತು ಕ್ರೀಯಾಶೀಲ ಗೆಳೆಯರ ಬಳಗ ಭಾನುವಾರ ಹಮ್ಮಿಕೊಂಡಿದ್ದ ‘ಸಾಹಿತ್ಯ ಸಂಸ್ಕøತಿ ಉತ್ಸವ-2023ರ ಕಾರ್ಯಕ್ರಮದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ ಮತ್ತು ‘ಜಿಲ್ಲಾ ಯುವ ಸಂಘಗಳ ಒಕ್ಕೂಟ’ದ ವತಿಯಿಂದ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರಿಗೆ ಸತ್ಕರಿಸಿ, ಅಭಿನಂದಿಸಲಾಯಿತು. ಬಳಗದ ಅಧ್ಯಕ್ಷ, ಉಪನ್ಯಾಸಕ ಎಚ್.ಬಿ.ಪಾಟೀಲ, ಒಕ್ಕೂಟದ ಅಧ್ಯಕ್ಷ ಡಾ.ಸುನೀಲಕುಮಾರ ಎಚ್.ವಂಟಿ, ಪ್ರಮುಖರಾದ ಶಿವರಾಜ ಅಂಡಗಿ, ಮುಡುಬಿ ಗುಂಡೇರಾವ, ಪ್ರೊ.ಯಶವಂತರಾಯ ಅಷ್ಟಗಿ, ಕೆ.ಗಿರಿಮಲ್ಲ, ಶಿವಯೋಗಪ್ಪ ಬಿರಾದಾರ, ಬಸವರಾಜ ಎಸ್.ಪುರಾಣೆ, ರಾಜೇಂದ್ರ ಮಾಡಬೂಳ ಸೇರಿದಂತೆ ಇನ್ನಿತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here