ಹೈದರಾಬಾದ್ ಕರ್ನಾಟಕ

ಸಸಿಗಳನ್ನು ಮಕ್ಕಳಂತೆ ಸಂರಕ್ಷಿಸಿ ಕಾಳಜಿಯಿಂದ ಸಂರಕ್ಷಿಸಿ

ಶಹಾಬಾದ: ಸಸಿಗಳನ್ನು ಹಚ್ಚುವುದರ ಜೊತೆಗೆ ಅವುಗಳನ್ನು ಮಕ್ಕಳಂತೆ ಸಂರಕ್ಷಿಸಿ ಕಾಳಜಿಯಿಂದ ಬೆಳೆಸಬೇಕೆಂದು ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ) ಮುಜಾಮಿಲ್ ಅಲಂ ಹೇಳಿದರು.

ಅವರು ನಗರಸಭೆ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಆಯೋಜಿಸಲಾದ ನನ್ನ ಲೈಫ್ ನನ್ನ ಸ್ವಚ್ಛ ನಗರ, ಜನತಾ ಜೀವ ವೈವಿಧ್ಯಮಯ ಮಾಸಾಚರಣೆ ಸಸಿ ನೆಡುವ ಕಾರ್ಯಕ್ರಮ ಹಾಗೂ ಪ್ರತಿಜ್ಞಾ ವಿಧಿ ಬೋಧನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮರಗಳನ್ನು ಬೆಳೆಸಿ ಸೂಕ್ತವಾದ ಪೋಷಣೆ ಮಾಡಿದರೆ ಕಾಲಕಾಲಕ್ಕೆ ಮಳೆಯಾಗುತ್ತದೆ.ಉತ್ತಮ ಗಾಳಿ ನೀಡುತ್ತದೆ. ಆದರೆ ಇಂದು ದೇಶದ ಎಲ್ಲಾ ಕಡೆ ಮುಂಗಾರು ಮಳೆ ಸರಿಯಾದ ವೇಳೆಗೆ ಬರದೇ ಇರುವದಕ್ಕೆ ಈ ಪರಿಸರ ನಾಶವೇ ಕಾರಣ. ಕೇವಲ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಹೇಳಿಕೊಂಡು ಕೂಡದೇ ಅದನ್ನು ಕಾರ್ಯರೂಪಕ್ಕೆ ತಂದರೆ ಮಾತ್ರ ಆ ಘೋಷ ವಾಕ್ಯಕ್ಕೆ ಮನ್ನಣೆ ಬರುತ್ತದೆ. ಇದನ್ನು ಪ್ರತಿಯೊಬ್ಬರೂ ಪಾಲಿಸಬೇಕು.ಹೆಚ್ಚು ಹೆಚ್ಚು ಮರಗಳನ್ನು ಬೆಳೆಸುವುದರಿಂದ ಉತ್ತಮ ಪರಿಸರದೊಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣವಾಗುತ್ತದೆ. ಪರಿಸರ ಸಮತೋಲನ ಕಾಪಾಡಲು ನಾವು ಹೆಚ್ಚು ಹೆಚ್ಚು ಸಸಿಗಳನ್ನು ಬೆಳೆಸುವ ಮುಖಾಂತರ ಪರಿಸರ ಸಂರಕ್ಷಣೆ ಮಾಡಬೇಕು. ಅಲ್ಲದೇ ಪರಿಸರ ಸಂರಕ್ಷಣೆಯಲ್ಲಿ ಸುಂದರಲಾಲ ಬಹುಗುಣ ಹಾಗೂ ಸಾಲು ಮರದ ತಿಮ್ಮಕ್ಕರ ಶ್ರಮ ಬಹಳಷ್ಟಿದೆ ಎಂದರು. ಅಲ್ಲದೇ ನಗರ ಪ್ರದೇಶದಿಂದ ಹಳ್ಳಿ ಹಳ್ಳಿಗಳಿಗೂ ಈ ಪರಿಸರದ ಬಗ್ಗೆ ಅರಿವು ಮೂಡಿಸಬೇಕಾದ ಜವಾಬ್ದಾರಿ ನಮ್ಮದಾಗಿದೆ ಎಂದರು.

ಕಸಾಪ ಕಲಬುರಗಿ ಗ್ರಾಮೀಣ ಮಾಜಿ ಅಧ್ಯಕ್ಷ ಶರಣಗೌಡ ಪಾಟೀಲ್, ಕುರುಬ ಸಮಾಜದ ಅಧ್ಯಕ್ಷ ಮಲ್ಕಣ್ಣ ಮುದ್ದಾ, ಆರೋಗ್ಯ ನಿರೀಕ್ಷಕರಾದ ಮೋಹಿಯೋದ್ದಿನ್,ಶಿವರಾಜಕುಮಾರ, ಹುಣೇಶ ದೊಡ್ಡಮನಿ, ಈರಣ್ಣ ಕುರಿ, ಅನೀಲಕುಮಾರ ಹೊನಗುಂಟಿ, ಭೀಮು, ಪ್ರವೀಣ, ಜಾನ್,ನಿರಂಜನ್ ಇತರರು ಇದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago