ಬಿಸಿ ಬಿಸಿ ಸುದ್ದಿ

ಪ್ರತಿಯೊಬ್ಬ ನಾಗರಿಕ ರಕ್ತದಾನ ಮಾಡಿದರೆ ಹೊಸ ರಕ್ತ ಉತ್ಪತಿ ಆಗುತ್ತಿದೆ

ಕಲಬುರಗಿ: ಪ್ರತಿಯೊಬ್ಬ ನಾಗರಿಕ ರಕ್ತದಾನ ಮಾಡುವುದರಿಂದ ಹೊಸ ರಕ್ತ ಉತ್ಪತ್ತಿ ಅಗುತ್ತದೆ ಜನರಲ್ಲಿ ರಕ್ತ ದಾನಿಗಳ ಮಹತ್ವವನ್ನು ಅರಿವು ಮೂಡಿಸುವುದು ಮುಖ್ಯ ಉದ್ದೇಶ ದಾನದಲ್ಲಿ ಶ್ರೇಷ್ಠ ದಾನ ರಕ್ತದಾನ ಮಹಾದಾನ. ನಾಲ್ಕು ಜನರಿಗೆ ರಕ್ತದ ಕೊರತೆ ನೀಗಿಸಲು ಆರೋಗ್ಯವಂತರು ರಕ್ತದಾನ ಮಾಡುವವರ ಸಂಖ್ಯೆ ಹೆಚ್ಚಾಗಬೇಕಾಗಿದೆ ಎಂದು ವಿಭಾಗಿಯ ಜಂಟಿ ಕಾರ್ಯಾಲಯದ ಉಪನಿರ್ದೇಶಕ ಡಾ. ಶರಣಬಸಪ್ಪ ಗಣಜಲಖೇಡ ಹೇಳಿದರು.

ಬುಧುವಾರದಂದು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಕರ್ನಾಟಕ ರಾಜ್ಯ ಏಡ್ ಪ್ರವೆನಷನ್, ಸೊಸೈಟಿ,ಬೆಂಗಳೂರು, ಜಿಲ್ಲಾ ಏಡ್ಸ ನಿಯಂತ್ರಣ ಮತ್ತು ತಡೆಗಟಗಟ್ಟುವ ಘಟಕ, ಜಿಲ್ಲಾ ಸಾರ್ವಜನಿಕ ಆಸ್ಪತ್ರೆ, ರೆಡ್ ರಿಬ್ಬನ ಕ್ಲಬಗಳು, ಸ್ವಯಂ ಸೇವಾ ಸಂಸ್ಥೆಗಳು, ಎನ್.ಎಸ್.ಎಸ್.ಘಟಕ, ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜಾಥಾ ಚಾಲನೆ ನೀಡಿ ಮಾತನಾಡಿದರು.

ಇತ್ತಿಚೆಗೆ ಓಡಿಸಾ ರೈಲು ದುರಂತ ಸಂಧರ್ಭದಲ್ಲಿ ಸಾವು ನೋವುಗಳಲ್ಲಿ ಬದಕುಳಿದ ಜನರಿಗೆ ಎಷ್ಟು ಯುವಕರು ಮುಂದೆ ಸದರಿ ಸಾಲಿನಲ್ಲಿ ನಿಂತು ರಕ್ತದಾನ ಮಾಡಿದವರಗೆ ಕೃತಜ್ಞತೆ ಸಲ್ಲಿದರು. ಜನರು ರತ್ತದಾನ ಮಾಡುವುದರಿಂದ ಯಾವುದೇ ಹಾನಿ ಇಲ್ಲ ಯುವ ಜನರು ಹೆಚ್ಚಿನ ರೀತಿಯಲ್ಲಿ ರತ್ತದಾನ ಮಾಡಬೇಕೆಂದು ಕರೆ ಕೊಟ್ಟರು.

ಜಿಲ್ಲಾ ಸರ್ಕಾರಿ ಆಸ್ಪತ್ರೆ ಜಿಮ್ಸ್ ಆವರಣದಿಂದ ಜಗತ್ ಸರ್ಕಲ್ ಮಾರ್ಗ ವಾಗಿ ಅನ್ನಪೂರ್ಣ ಕ್ರಾಸ್ ನಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ. ಆವರಣದಲ್ಲಿ ಕೊನೆ ಗೊಂಡಿತು . ಪ್ರಮುಖರಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜಶೇಖರ ಮಾಲಿ. ಜಿಲ್ಲಾ ಶಾಸ್ತ್ರಜ್ಞರು ಹಾಗೂ ಅಧಿಕ್ಷಕರು, ಜಿಲ್ಲಾ ಆಸ್ಪತ್ರೆ ಕಲಬುರಗಿ ಡಾ|| ಎ.ಎಸ್. ರುದ್ರವಾಡಿ . ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿಗಳು ಡಾ || ಚಂದ್ರಕಾಂತ ನರಬೋಳಿ. ಡಿ ಎಲ್ ಓ ಡಾ|| ರಾಜಕುಮಾರ ಕುಲಕರ್ಣಿ, ಜಿಲ್ಲಾ ಕಾಲರ ನಿಯಂತ್ರಣಾಧಿಕಾರಿ ಡಾ|| ವಿವೇಕಾನಂದ ರಡ್ಡಿ, ಡಾ|| ಜಗದೀಶ ಕಟ್ಟಿ ಮನಿ ಎ ಆರ್ ಟಿ ವೈದ್ಯಾಧಿಕಾರಿ ಡಾ || ರೇಣುಕ ಪ್ರಸಾದ . ಜಿಲ್ಲಾ ಡಿ ಆರ್ ಟಿಬಿ ಟೀಸ್ ಸಮಾಲೋಚಕ ಮಂಜುನಾಥ ಕಂಬಾಳಿಮಠ , ಜಿಲ್ಲಾ ಪಿಪಿಎಂ ಸಂಯೋಜಕ ಶಶಿಧರ ಕಮಲಪುರ, ಜಿಮ್ಸ್ ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯ ನಸಿರ್ಂಗ್ ವಿಧ್ಯಾರ್ಥಿಗಳು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಅನೇಕರು ಭಾಗವಹಿಸಿ ಯಶಸ್ವಿಗೊಳಿಸಿದ್ದರು.

ಘೋಷಣೆ : ರಕ್ತ ನೀಡಿ , ಪ್ಲಾಸ್ಮ ನೀಡಿ, ಜೀವನ ಹಂಚಿಕೊಳ್ಳಿ, ಹೆಚ್ಚಾಗಿ ಹಂಚಿಕೊಳ್ಳಿ. ನಂತರ ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರಾದೇಶಿಕ ಕಚೇರಿ ಮತ್ತು ಸ್ನಾತಕೋತ್ತರ ಕೇಂದ್ರ ಸಭಾಂಗಣದಲ್ಲಿ ಹಾಗೆ ಅತಿ ಹೆಚ್ಚು ರಕ್ತದಾನ ( ರತ್ತದಾನ / ಪ್ಲಾಸ್ಮ ದಾನ ) ಮಾಡಿದವರು ಡಾ|| ವಿವೇಕಾನಂದ ರೆಡ್ಡಿ ಡಾ|| ಸಿದ್ದು ಮೊಳ ಕೆ ಆರ್ ಪಳ್ಳಿ . ಸುದೇವ್ ಸಿಂಗ್ ಡಾ|| ವಿಜಯ ಶ್ರೀ ಮಠದ್ ಗುರುದತ್ತ ರೆಡ್ಡಿ ಪ್ರಶಂಸನೀಯ ಪತ್ರ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಪ್ರಮುಖರಾದ ಪ್ರಾದೇಶಿಕ ನಿರ್ದೇಶಕರು ವಿ.ಟಿ.ಯು. ಸ್ನಾತಕೋತ್ತರ ಕೇಂದ್ರದ ಡಾ|| ಬಸವರಾಜ ಗಾದಗೆ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿಗಳು ಡಾ|| ಚಂದ್ರಕಾಂತ ನರಬೋಳಿ , ಸಭಾಪತಿಗಳು, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಪ್ಪಾರಾವ ಅಕ್ಕೋಣಿ. ಉಪ ಸಭಾಪತಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅರುಣಕುಮಾರ ಲೋಯಾ. ಭಾಗ್ಯಲಕ್ಷ್ಮೀ . ರಕ್ತನಿಧಿ ಕೇಂದ್ರ ಸರ್ಕಾರಿ ಜಿಮ್ಸ್ ಆಸ್ಪತ್ರೆಯ ಡಾ|| ಮಮತಾ ಪಾಟೀಲ. ಗೌರವ ಕಾರ್ಯದರ್ಶಿಗಳು ಭಾ.ರೆ.ಸಂಸ್ಥೆಯ ರವೀಂದ್ರ ಶಾಬಾದಿ . ಕಾರ್ಯಕ್ರಮ ಅಧಿಕಾರಿಗಳು ವಾಯ್.ಆರ್ ಸಿ.ವಿ.ಟಿ.ಯು. ಡಾ|| ಶರಣಗೌಡ ಬಿರಾದಾರ . ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago