ಲಿಂಗಸ್ಗೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು) ನ ಲಿಂಗಸ್ಗೂರು ತಾಲೂಕು ಸಮ್ಮೇಳನ ಇಂದು ಪಟ್ಟಣದ ಗುರಭವನದಲ್ಲಿ ಜರುಗಿತು.
ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು)ರಾಜ್ಯ ಜಂಟಿ ಕಾರ್ಯದರ್ಶಿ ಶಬ್ಬೀರ್, ದುಡಿಯುವ ವರ್ಗದ ಹೋರಾಟದ ಫಲವಾಗಿ ರಚನೆಗೊಂಡ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಸಂಗ್ರಹಿತಗೊಂಡಿರುವ ಸಾವಿರಾರು ಕೋಟಿ ರೂಪಾಯಿ ಹಣ ದುರುಪಯೋಗ ಆಗುತ್ತಿದೆ. ನ್ಯಾಯಾಲಯ ಕಾರ್ಮಿಕರಿಗೆ ಹಣ ಪಾವತಿಸುವಂತೆ ಖಡಕ್ ಆದೇಶ ನೀಡಿದ್ದರೂ ಸರಕಾರಗಳು ಪಾಲಿಸುತ್ತಿಲ್ಲ ಎಂದು ಹೇಳಿದರು.
ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ನಿಂಗಪ್ಪ ಎಂ ನಿರೂಪಿಸಿದರು. ವೆಂಕಟೇಶ ವಂದಿಸಿದರು.
ಈ ಸಂದರ್ಭಗಳಲ್ಲಿ ಕೆಪಿಆರ್ ಎಸ್ ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ, ಸಿಐಟಿಯು ತಾಲೂಕು ಸಂಚಾಲಕ ಮಹಮ್ಮದ್ ಹನೀಫ್, ಆಟೋ ಯೂನಿಯನ್ ಅಧ್ಯಕ್ಷ ಬಾಬಾಜಾನಿ, ಸಿಬ್ಲ್ಯೂಎಫ್ ಐ ಮುಖಂಡರಾದ ಗೀತಾ ನಿಲೋಗಲ್, ಫಾಲ್ ಸನ್, ಸಿಐಟಿಯು ಹಟ್ಟಿ ಚಿನ್ನದ ಗಣಿ ಘಟಕದ ಉಪಾಧ್ಯಕ್ಷ ಫಕೃದ್ದೀನ್, ಅಲ್ಲಾಭಕ್ಷ, ಭೀಮಣ್ಣ ಉಪ್ಪೇರಿ, ಯೂಸುಫ್ ಸಾಬ್ ಗ್ವಾಡಿಕರ್, ಶಾಂತಪ್ಪ ಮೇಸ್ತ್ರಿ, ಎಸ್ಎಫ್ಐ ಮುಖಂಡ ವಿಶ್ವ ಅಂಗಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…