ಏಕಾಗ್ರತೆಗಾಗಿ ಮನಸ್ಸನ್ನು ತರಬೇತಿಗೊಳಿಸುವುದು ಅತ್ಯಂತ ಮಹತ್ವದ ಕೆಲಸ: ಮನೋತಜ್ಞ ಭುಜಬಲಿ

ಕಲಬುರಗಿ: ವಿದ್ಯಾರ್ಥಿಗಳು ಏಕಾಗ್ರತೆ ಸಾಧಿಸಲು ಮನಸ್ಸನ್ನು ಸರಿಯಾದ ದಾರಿಯಲ್ಲಿ ಯಶಸ್ಸಿಗಾಗಿ ತರಬೇತಿಗೊಳಿಸುವುದು ಅತ್ಯಂತ ಮಹತ್ವದ ಕೆಲಸಗಳಲ್ಲಿ ಒಂದಾಗಿದೆ ಎಂದು ಬೆಂಗಳೂರಿನ ಖ್ಯಾತ ಮನೋತಜ್ಞ, ಹ್ಯಾಪಿನೆಸ್ ಎಂಜಿನಿಯರ್ ತರಬೇತುದಾರರಾದ ಶ್ರೀ.ಭುಜಬಲಿ ಬೋಗಾರ ಹೇಳಿದರು.

ನಿನ್ನೆ ನಗರದ ಚಂದ್ರಕಾಂತ ಪಾಟೀಲ್ ಮೆಮೊರಿಯಲ್ ಪಿಯು ಕಾಲೇಜಿನಲ್ಲಿ ಮೌನಯೋಗಿ ಫೌಂಡೇಶನ್ ಹಾಗೂ ಟ್ರಾನ್ಸ್‌ಫಾರ್ಮೊ ಇನ್‌ಕಾರ್ಪ್ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಯಶಸ್ಸಿನ ರಹಸ್ಯ ಸೂತ್ರಗಳು ಎಂಬ ವಿಶೇಷ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಪರಿಶುದ್ಧ ಆಲೋಚನೆಗಳು ನಮ್ಮ ಸುಪ್ತಮನಸ್ಸನ್ನು ವ್ಯವಸ್ಥಿತವಾಗಿಡಲು ಮತ್ತು ಮೆದುಳನ್ನು ಶಾಂತವಾಗಿಡಲು ಸಹಕಾರಿಯಾಗಿವೆ. ವಿದ್ಯಾರ್ಥಿಗಳು ಹಸಿವಾದಾಗ ಮಾತ್ರ ಆಹಾರ ಸೇವಿಸಬೇಕು, ಆಹಾರವನ್ನು ಸಮಾಧಾನ ಮನಸ್ಸಿನಿಂದ ಚೆನ್ನಾಗಿ ಅಗಿದು ತಿನ್ನಬೇಕು, ಹಸಿವಿಗೆ ತಕ್ಕಂತೆ ಅಗತ್ಯವಿದ್ದಷ್ಟು ಮಾತ್ರ ಆಹಾರ ಸೇವಿಸಬೇಕು ಇದರಿಂದ ಮನಸ್ಸು ಜಾಗೃತ ಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಮನೋತಜ್ಞ ಭುಜಬಲಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ವೃದ್ಧಿಸಲು ಹಾಗೂ ಅವರಲ್ಲಿರುವ ಕೀಳರಿಮೆಯನ್ನು ಕಡಿಮೆ ಮಾಡಲು ಸುಪ್ತಮನಸ್ಸನ್ನು ರಿಪ್ರೋಗ್ರಾಮ್ ಮಾಡುವ ತಂತ್ರಗಳನ್ನು ಹೇಳಿಕೊಟ್ಟರು. ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡರು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂನ ವ್ಯಕ್ತಿಗಳಾಗಿ – ಬೆಂಗಳೂರಿನ ಎನ್.ಎಲ್.ಪಿ ಮನೋತಜ್ಞ ಭುಜಬಲಿ ಬೋಗಾರ, ಮೌನಯೋಗಿ ಫೌಡೇಶನ್‌ನ ಶ್ರಾವಣಯೋಗಿ ಹಿರೇಮಠ, ಚಂದ್ರಕಾಂತ ಪಾಟೀಲ್ ಮೆಮೊರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಜಿ.ಮಂಜುನಾಥ, ಉಪನ್ಯಾಸಕರಾದ ವಿಕಾಸ, ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

3 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

3 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

3 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

3 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

4 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420