ಸುರಪುರ: ಗುಲಬರ್ಗಾ ವಿಶ್ವವಿದ್ಯಾಲಯದ 41ನೇ ಘಟಿಕೋತ್ಸವದಲ್ಲಿ ಮೂಲತ ಸುರಪುರದವರಾಗಿರುವ ಹಾಗೂ ಸದ್ಯ ಯಾದಗಿರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಪ್ರಲ್ಹಾದ ಜೋಷಿ ಬೀರನೂರ ಅವರ ಪುತ್ರಿ ರಾಜಶ್ರೀ ಜೋಷಿ ಅವರು ಸೂಕ್ಷ್ಮಜೀವಿಶಾಸ್ತ್ರ(ಮೈಕ್ರೋಬಯಾಲಜಿ) ವಿಭಾಗದಲ್ಲಿ ಏಳು ಚಿನ್ನದ ಪದಕಗಳನ್ನು ಪಡೆದಿದ್ದಾರೆ.
ರಾಜಶ್ರೀ ಜೋಷಿ ಅವರು ಮೊದನಿಂದಲೂ ಪ್ರತಿಭಾವಂತೆ ವಿದ್ಯಾರ್ಥಿನಿಯಾಗಿದ್ದು ಸತತ ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡುತ್ತಾ ಬಂದಿದ್ದು ಸೂಕ್ಷ್ಮಜೀವಿಶಾಸ್ತ್ರ ವಿಭಾಗದಲ್ಲಿ ಏಳು ಚಿನ್ನದ ಪದಕಗಳು ಒಲಿದು ಬಂದಿದ್ದು ಇವರ ತಂದೆ ಯಾದಗಿರಿಯ ಸರಕಾರಿ ಡಿಗ್ರಿ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕರಾಗಿದ್ದು ಹಾಗೂ ಇವರ ತಾಯಿ ಗೃಹಿಣಿ ಆಗಿದ್ದಾರೆ.
ಪ್ರಾಥಮಿಕ ಹಂತದಲ್ಲಿ 5ನೇ ತರಗತಿಯವರೆಗೆ ನಗರದ ಗಾಯತ್ರಿ ಶಾಲೆಯಲ್ಲಿ ಓದಿದ್ದು ನಂತರ ಎಸ್ಎಸ್ಎಲ್ಸಿ ಮಹಾತ್ಮ ಗಾಂಧಿ ಪ್ರೌಢಶಾಲೆ ಹಾಗೂ ಪಿಯುಸಿ ಯಾದಗಿರಿಯ ಆರ್ವಿ ಕಾಲೇಜಿನಲ್ಲಿ ಮುಗಿಸಿದ್ದು ಬಿ.ಎಸ್ಸಿ ಪದವಿಯನ್ನು ಬೆಂಗಳೂರನ ಆಚಾರ್ಯ ಕಾಲೇಜ್ ಆಫ್ ಸೈನ್ಸನಲ್ಲಿ ಪೂರೈಸಿದ್ದಾರೆ.
ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಇಂದು (ಸೋಮವಾರ) ನಡೆಯಲಿರುವ 41ನೇ ಘಟಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವದು.
ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…