ಕಲಬುರಗಿ : ಕಲಬುರಗಿಯಿಂದ ಪ್ರತಿ ತಿಂಗಳಿಗೆ ಸುಮಾರು 2 ಲಕ್ಷ ಜನ ರಾಜಧಾನಿ ಬೆಂಗಳೂರಿಗೆ ಪ್ರವಾಸ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಮುಂಬೈ ವಲಯ ಕಚೇರಿ ಮತ್ತು ಸೊಲಾಪೂರ ವಿಭಾಗೀಯ ಕಚೇರಿ, ಕಲಬುರಗಿಯಿಂದ ಹೊಸದಾಗಿ ರೈಲು ಪ್ರಾರಂಭಿಸುವ ಬಗ್ಗೆ ಕಿಂಚಿತ್ತೂ ಲಕ್ಷಕ್ಕೆ ತೆಗೆದುಕೊಳ್ಳದೇ, ಮಲತಾಯಿ ಧೋರಣೆ ಮಾಡುತ್ತಿರುವುದು ಖಂದನೀಯವಾಗಿದೆ.
ಆದಷ್ಟು ಶೀಘ್ರ ಕಲಬುರಗಿಯಿಂದ ಬೆಂಗಳೂರಿಗೆ ಮತ್ತು ಬೀದರ ಮಾರ್ಗವಾಗಿ ಕಲಬುರಗಿ ಮೂಲಕ ಯಾದಗಿರ ರಾಯಚೂರು ಮುಖಾಂತರ ಬೆಂಗಳೂರಿಗೆ ಹೊಸ ರೈಲುಗಳು ಕಾಲಮಿತಿಯಲ್ಲಿ ಮಾಡದಿದ್ದರೆ, ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯಿಂದ ಕಲಬುರಗಿ ರೈಲ್ವೆ ನಿಲ್ದಾಣದ ಎದುರು ಉಗ್ರ ಹೋರಾಟ ನಡೆಸುವುದಾಗಿ, ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯಿಂದ ಜನರಲ್ ಮ್ಯಾನೇಜರ್, ಮುಂಬೈ ವಲಯಕ್ಕೆ ಸ್ಟೇಷನ್ ಮಾಸ್ಟರ್ ಕಲಬುರಗಿಯವರ ಮುಖಾಂತರ ಪತ್ರ ಸಲ್ಲಿಸಲಾಗಿದೆ.
ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ, ಲಕ್ಷ್ಮಣ ದಸ್ತಿಯವರ ನೇತೃತ್ವದಲ್ಲಿ ಸಮಿತಿಯ ನಿಯೋಗ, ಕಲಬುರಗಿ ರೈಲ್ವೆ ಸ್ಟೇಷನ್ ಮಾಸ್ಟರ ಅವರಿಗೆ ಭೇಟಿ ಮಾಡಿ ವಿಸ್ತೃತ ಚರ್ಚಿಸಿ ಜನರಲ್ ಮ್ಯಾನೇಜರ ಅವರ ಹೆಸರಿನ ಪತ್ರವನ್ನು ನೀಡಿ ಕಾಲಮಿತಿಯಲ್ಲಿ ಕಲಬುರಗಿ-ಬೆಂಗಳೂರು ಹೊಸ ರೈಲು ಆರಂಭಿಸಲು ಒತ್ತಾಯಿಸಲಾಯಿತು.
ಅದೇ ರೀತಿ ಸಮಿತಿ ವತಿಯಿಂದ ಸಿಕಿಂದ್ರಾಬಾದ ವಲಯಕ್ಕೆ ಪತ್ರ ಬರೆದು, ಬೀದರ ಕಲಬುರಗಿ, ಯಾದಗೀರ, ರಾಯಚೂರು ಮಾರ್ಗವಾಗಿ ಹೊಸ ರೈಲು ಆರಂಭಿಸಲು ಒತ್ತಾಯಿಸಲಾಗಿದೆ. ಒಟ್ಟಾರೆ, ಬೀದರದಿಂದ ಮತ್ತು ಕಲಬುರಗಿಯಿಂದ ಎರಡು ಹೊಸ ರೈಲುಗಳು ಬೆಂಗಳೂರಿಗೆ ತುರ್ತಾಗಿ ಪ್ರಾರಂಭಿಸಿ ಈ ಭಾಗದ ಜನರ ಬೇಡಿಕೆಗೆ ಗಂಭೀರವಾಗಿ ಸ್ಪಂಧಿಸಿ ರೈಲ್ವೆ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಲು ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಸಮಿತಿಯ ಮುಖಂಡರಾದ ಡಾ. ಮಾಜಿದ್ ದಾಗಿ, ಕಲ್ಯಾಣರಾವ ಪಾಟೀಲ, ಅಸ್ಲಂ ಚೌಂಗೆ, ಶಿವಾನಂದ ಕಾಂದೆ, ಸಂಧ್ಯಾರಾಜ ಸ್ಯಾಮ್ಯೂವೆಲ್, ಸಾಜಿz ಅಲಿ ರಂಜೋಲಿ, ಸಂತೋಷ ಜವಳಿ, ಮಹ್ಮದ ಗೌಸ್, ಶರಣಬಸಪ್ಪ ಕುರಿಕೋಟಾ, ರಾಜು ಜೈನ್, ಶಿವಾನಂದ ಬಿ., ಬಾಬಾ ಫಕ್ರುದ್ದೀನ್ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…