ಕಲಬುರಗಿ: ಅನ್ನಭಾಗ್ಯ ಯೋಜನೆಗೆ ಅಕ್ಕಿ ಸರಬರಾಜು ಮಾಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಸಿಡಿದೆದ್ದಿದೆ.
ಕಲಬುರಗಿ ಯಲ್ಲಿ ಇಂದು ಸಚಿವದ್ವಯರಾದ ಪ್ರಿಯಾಂಕ್ ಖರ್ಗೆ ಹಾಗೂ ಡಾ ಶರಣಪ್ರಕಾಶ ಪಾಟೀಲ, ಶಾಸಕ ಎಂ.ವೈ ಪಾಟೀಲ್, ಆಳಂದ ಶಾಸಕ ಬಿ.ಆರ್ ಪಾಟೀಲ್, ಶಾಸಕ ಅಲ್ಲಮಪ್ರಭು ಪಾಟೀಲ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಗದೇವ್ ಗುತ್ತೇದಾರ್, ಮಾಜಿ ಸಚಿವ ರೇವುನಾಯಕ ಬೆಳಮಗಿ, ಪಾಲಿಕೆ ಸದಸ್ಯ ಸೈಯದ್ ಅಹ್ಮದ್, ಮಜರ್ ಆಲಮ್ ಖಾನ್ ಸೇರಿದಂತೆ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಕೇಂದ್ರದ ಧೋರಣೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.