ಶರಣರ ನಾಡಲ್ಲಿ ಅರಳಿಸಿ ಬೆಳೆಸುವ ತಾಕತ್ತಿದೆ; ಚಿತ್ರನಟ ಕ್ರಾಂತಿ

ಕಲಬುರಗಿ: ರಣರು ನಡೆದಾಡಿದ ಕಲ್ಯಾಣ ನಾಡಿನಲ್ಲಿದೆ ಬೆಳೆಯುವ ತಾಕತ್ತು, ಪ್ರತಿಯೊಬ್ಬರೂ ಅವಕಾಶ ವಂಚಿತರಾಗದೆ ಅವಕಾಶ ಸೃಷ್ಟಿಸಿ ಸಾಧನೆಗೈಯಬೇಕು ಸಾಧನೆ  ಮೈಗಳ್ಳರ  ಸ್ವತ್ತಲ್ಲ ಪರಿಶ್ರಮ ವಾದಿಗಳ ಸ್ವತ್ತಾಗಿದೆ ಎಂದು “ಶ್ರೀಮಂತ” ಕನ್ನಡ ಚಲನಚಿತ್ರ ನಟರಾದ ಕ್ರಾಂತಿ ಹೇಳಿದರು.

ನಗರದ ಭವಾನಿ ನಗರದಲ್ಲಿರುವ ಬಬಲಾದ ಮಠದಲ್ಲಿ 163ನೇ ಶಿವಾನುಭವಗೋಷ್ಠಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ ನಮ್ಮ ಭಾಗದ ಪ್ರತಿಭೆಗಳಿಗೆ ಕೊರತೆ ಇಲ್ಲ, ಪ್ರೋತ್ಸಾಹಿಸುವ ವೇದಿಕೆ ಅವಶ್ಯಕತೆ ಇದೆ ಈ ನಿಟ್ಟಿನಲ್ಲಿ ಬಬಲಾದ ಮಠವು ಪ್ರತಿ ಸೋಮವಾರ ಶಿವಾನುಭವಗೋಷ್ಠಿ ಕಾರ್ಯಕ್ರಮ ಹಮ್ಮಿಕೊಂಡು ಈ ಭಾಗದ ಮಕ್ಕಳಿಗೆ, ಕಲಾವಿದರಿಗೆ, ವೇದಿಕೆ ಕಲ್ಪಿಸುವುದರೊಂದಿಗೆ ಸಂಸ್ಕಾರಯುತ ಸಮಾಜ ನಿರ್ಮಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಮಾರ್ಮಿಕವಾಗಿ ನುಡಿದರು.

ಉಪನ್ಯಾಸ ನೀಡಿದ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ರೇವಣಸಿದ್ದಪ್ಪ ದುಕಾನ ಮಾತನಾಡುತ್ತಾ ಭಾರತ ದೇಶ ವಿವಿಧತೆಯಲ್ಲಿ ಏಕತೆ ಹೊಂದಿದೆ, ಆಧ್ಯಾತ್ಮಿಕತೆಯಲ್ಲಿ ಜಗತ್ತಿಗೆ ಆದರ್ಶ ರಾಷ್ಟ್ರವಾಗಿದೆ ಆದಿ ಅನಾದಿ ಕಾಲದಿಂದಲೂ ಸಂತರು, ಶರಣರು ಜನಿಸಿ ಉತ್ತಮ ಸಮಾಜ ನಿರ್ಮಿಸುವ ಕಾರ್ಯ ಮಾಡಿ ಅಮರರಾಗಿ ಉಳಿದಿದ್ದಾರೆ. ಅಂಥವರ ವಿಚಾರಗಳು ನಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕೆಂದು ಹೇಳಿದರು.

ಶ್ರೀ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಗುರುಪಾದಲಿಂಗ ಮಹಾಸ್ವಾಮಿಗಳು ನೇತೃತ್ವ ವಹಿಸಿದರು. ಕಾರ್ಯಕ್ರಮದಲ್ಲಿ ನ್ಯಾಯವಾದಿ ಹಣಮಂತರಾಯ ಅಟ್ಟೂರ, ಸಂಗಮೇಶ ನಾಗೂರ, ಕವಿತಾ ದೇಗಾಂವ, ರೇವಣಸಿದ್ದಯ್ಯ ಶಾಸ್ತ್ರಿ, ಶರಣು ಜವಳಗಿ, ಸಿದ್ದಣ್ಣವಾಡಿ, ವಸಂತ ಜಾಧವ, ಮಾಣಿಕ ಮಿರ್ಕಲ್, ಗುರುರಾಜ ಹಸರಗುಂಡಗಿ, ಸಂಗೀತಾ ಗರೂರ, ಕುಮಾರಿ ಸಿಂಚನಾ, ಸಹನಾ, ವಿಶ್ವಜ್ಯೋತಿ ಸೇರಿದಂತೆ ಅನೇಕ ಜನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಚಿತ್ರ ನಟರಿಗೆ ಶ್ರೀಮಠದ ವತಿಯಿಂದ ಗೌರವಿಸಲಾಯಿತು

emedialine

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

3 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

7 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

7 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

10 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

21 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420