ಕಲಬುರಗಿಯಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಕಾಮಗಾರಿ ಶೀಘ್ರ ಆರಂಭ; ಕೇಂದ್ರ ಸಚಿವ ಪಿಯೂಷ್ ಗೋಯಲ್ ಭರವಸೆ

ಕಲಬುರಗಿ: ಇಂದು ನವ ದೆಹಲಿಯಲ್ಲಿ ಸಂಸದ ಡಾ. ಉಮೇಶ್ ಜಾಧವ ಅವರು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ಭೇಟಿ ಮಾಡಿ ಕಲಬುರಗಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ನಲ್ಲಿ ಶೀಘ್ರ ಕಾಮಗಾರಿ ಪ್ರಾರಂಭ ಮಾಡಲು ಮನವಿ ಮಾಡಿದರು. ಹಾಗೆಯೇ ಹೆಚ್ಚಿನ ಹೂಡಿಕೆದಾರರನ್ನು ಕರೆತರುವ ನಿಟ್ಟಿನಲ್ಲಿ ಕೆಲಸವಾಗಬೇಕೆಂದು ಕೋರಿದರು.

ಈಗಾಗಲೇ ಕಲಬುರಗಿ ಮೆಗಾ ಟೆಕ್ ಸ್ಟೈಲ್ ಪಾರ್ಕ್ ನಲ್ಲಿ ಹೂಡಿಕೆ ಮಾಡಲು ಅನೇಕ ವಿದೇಶದಿಂದ ಹೂಡಿಕೆದಾರರನ್ನು ಕರೆದು, ಈಗಾಗಲೇ ಕೇಂದ್ರದಿಂದ ಘೋಷಣೆಯಾಗಿರುವ 7 ಮೆಗಾ ಟೆಕ್ಸ್ಟೈಲ್ ಪಾರ್ಕ್ ನಲ್ಲಿ ಹಣ ಹೂಡಿಕೆ ಮಾಡಲು ಮನವಿ ಮಾಡಿದ್ದೇವೆ, ಕೆಲವು ವಿದೇಶಿ ಕಂಪನಿಗಳು ಇದಕ್ಕೆ ಒಪ್ಪಿಗೆ ಕೂಡ ನೀಡಿದ್ದಾರೆ, ಎಲ್ಲಾ ಹೂಡಿಕೆದಾರರ ಪ್ರಥಮ ಆದ್ಯತೆ ಕರ್ನಾಟಕ ವಾಗಿದೆ ಎಂದು ಕೇಂದ್ರದ ವಾಣಿಜ್ಯ ಸಚಿವರಾದ ಪಿಯೂಷ್ ಗೋಯಲ್ ರವರು ತಿಳಿಸಿದರು.

ಹಾಗೆಯೇ ಈಗಾಗಲೇ ರಾಜ್ಯ ಸರ್ಕಾರದ ಸಚಿವರು ಹಾಗೂ ಜವಳಿ ಇಲಾಖೆಯ ಕಾರ್ಯದರ್ಶಿಗಳ ಜೊತೆ ಚರ್ಚಿಸಿ ಇದಕ್ಕೆ ರಾಜ್ಯ ಸರ್ಕಾರದಿಂದ ಬೇಕಾಗಿರುವ ಕ್ರಮಗಳನ್ನು ಕೈಗೊಂಡು ಶೀಘ್ರ ಕಾಮಗಾರಿ ಶುರು ಮಾಡಲು ಸೂಚಿಸಿದ್ದೇನೆ ಎಂದು ಹೇಳಿದರು.

ಹಾಗೆಯೇ ವಾಣಿಜ್ಯ ಇಲಾಖೆಯ ಕೇಂದ್ರದ ಹೆಚ್ಚುವರಿ ಕಾರ್ಯದರ್ಶಿಯಾದ ರಾಜೇಶ್ ಕಂಸಲ್, ಐಎಎಸ್ ರವರನ್ನು ಮೆಗಾ ಟೆಕ್ಸ್ಟೈಲ್ ಪಾರ್ಕಗೆ ಬೇಕಾಗಿರುವ ಹಣವನ್ನು ಬಿಡುಗಡೆ ಮಾಡಲು ಸೂಚಿಸಿದರು.ಇದೇ ಸಂದರ್ಭದಲ್ಲಿ ಕಲಬುರಗಿ ನಗರದ ಉದ್ದಿಮಿಗಳಾದ ಕಿರಣ್ ಕುಮಾರ್ ಶೆಟ್ಕರ್ ಸಾಥ್ ನೀಡಿದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

2 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

5 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

9 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

10 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

12 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420