ಗಂಗಾವತಿ: ಕೊಪ್ಪಳ ಜಿಲ್ಲೆಯ BCM ಹಾಸ್ಟಲ್ ನಲ್ಲಿ ಅಧಿಕಾರಿಗಳ ಎಡವಟ್ಟು ಮತ್ತು ಸರ್ಕಾರದ ನಿರ್ಲಕ್ಷ್ಯ ದಿಂದಾಗಿ ಐವರು ವಿದ್ಯಾರ್ಥಿಗಳು ಸಾವನ್ನು ಅಪ್ಪಿದ್ದಾರೆ. ಈ ಸಾವಿಗೆ ಕಾರಣರಾದ ಸಿಬ್ಬಂದಿ ಹಾಗೂ ವಾರ್ಡನ್ ನ್ನು ಸೇವೆಯಿಂದ ವಜಾಗೋಳಿಸಿ, ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡು ಬಂದಿಸಿಬೇಕು ಹಾಗೂ ವಿದ್ಯಾರ್ಥಿಗಳ ಕುಟುಂಬಕ್ಕೆ ಹತ್ತುಲಕ್ಷ ರೂಪಾಯಿಗಳ ಪರಿಹಾರ ಕೊಡಬೇಕು ಮತ್ತು ಎಲ್ಲಾ ಹಾಸ್ಟಲ್ ಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಸಿ, ಜಿಲ್ಲೆಯ ಎಲ್ಲಾ ಸ್ವಂತ ಕಟ್ಟಡ ಕಟ್ಟಿಸಿಬೇಕು ಎಂದು ಆಗ್ರಹಿಸಿ ಇಂದು ಗಂಗಾವತಿ ನಗರದಲ್ಲಿ SFI ವತಿಯಿಂದ ಪ್ರತಿಭಟನೆ ನಡೆಸಿ ಅಗ್ರಹಿಸಿದರು.
ಪ್ರತಿಭಟನೆ ಯನ್ನು ಉದ್ದೇಶಿಸಿ ಮಾತನಾಡಿದ SFI ಜಿಲ್ಲಾಧ್ಯಕ್ಷರಾದ ಅಮರೇಶ ಕಡಗದ್ ಖಾಸಗಿ ಕಟ್ಟಡದಲ್ಲಿ ಹಾಸ್ಟೆಲ್ ನಡೆಸುವುದು ಅಪಾಯಕ್ಕೆ ಆಹ್ವಾನಿಸಿದಂತೆ ಕೂಡಲೇ ಸ್ವಂತ ಕಟ್ಟಡವನ್ನು ನಿರ್ಮಿಸಿ ಹಾಸ್ಟೆಲ್ ಸ್ಥಳಾಂತರ ವನ್ನು ಮಾಡಬೇಕೆಂದು ಎಷ್ಟೋ ಬಾರಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರು ಎಚ್ಚೆತುಕೊಳ್ಳಲ್ಲಿಲ್ಲ ಅದರ ಪರಿಣಾಮ ವೇ ಈ ಸಾವು ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ಈ ಸಂಧರ್ಭದಲ್ಲಿ ಮುಖಂಡರಾದ ಗ್ಯಾನೇಶ್ ಕಡಗದ್, ಮಂಜುನಾಥ ಡಗ್ಗಿ, ಬಾಳಪ್ಪ ಹುಲಿ ಹೈದರ್, ಹಾಸ್ಟೆಲ್ ವಿದ್ಯಾರ್ಥಿಗಳು ಸೇರಿದಂತೆ ಅನೇಕರಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…