ಆಳಂದ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಮುಂಬರುವ ಜುಲೈ 08 ರಂದು ತಾಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಎಸ್.ಎಂ.ಅರುಟಗಿ ಹೇಳಿದರು.
ಪಟ್ಟಣದ ಜೇ.ಎಂ.ಎಫ್.ಸಿ.ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಬೆಳಿಗ್ಗೆ ನಡೆದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಬ್ಯಾಂಕ್ ವಸೂಲಾತಿ ಪ್ರಕರಣಗಳು ಇತ್ಯರ್ಥ ಪಡಿಸಲು ಅವಕಾಶ ಕೊಡಿ ಎಂದು ಬ್ಯಾಂಕ್ ಅಧಿಕಾರಿಗಳಿಗೆ ನ್ಯಾಯಾಧೀಶರು ಮನವಿ ಮಾಡಿಕೊಂಡರು.
ಕಿರಿಯ,ಹೆಚ್ಚುವರಿ ನ್ಯಾಯಾಧೀಶರು,ವಕೀಲರ ಸಂಘದ ಕಾರ್ಯದರ್ಶಿ,ಸದಸ್ಯರು ಸೇರಿದಂತೆ ಹಿರಿಯ ವಕೀಲರು,ಪೋಲಿಸ್ ಅಧಿಕಾರಿಗಳು ಸೇರಿದಂತೆ ಹಲವರು ಇದ್ದರು.