ಬಿಸಿ ಬಿಸಿ ಸುದ್ದಿ

ಯೋಗದಲ್ಲಿ ರೋಗ ನಿರೋಧಕ ಶಕ್ತಿ ಅಡಗಿದೆ: ಡಾ. ಹೊರಗಡೆ.

ಆಳಂದ: ಆಯುರ್ವೇದ ಔಷಧಿ ಉಪಚಾರದೊಂದಿಗೆ ಯೋಗದಲ್ಲಿ ರೋಗನಿರೋಧಕ ಶಕ್ತಿ ಅಡಗಿದೆ ಯೋಗವು ಆರೋಗ್ಯಕ್ಕೆ ಮದ್ದಾಗಿದ್ದು ಇದು ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಕಾರಣವಾಗಿದೆ ನಿತ್ಯ ಯೋಗಾಸನದಲ್ಲಿ ತೊಡಗುವುದು ಮುಖ್ಯವಾಗಿದೆ ಎಂದು ಆಯುಷ್ಯ ಇಲಾಖೆಯ ವೈದ್ಯಾಧಿಕಾರಿ ಡಾ. ಅಪ್ಪಾರಾವ್ ಅರಗಡೆ ಅವರು ಹೇಳಿದರು.

ಪಟ್ಟಣದ (ದ) ಬ್ರಿಜ್ ಆಂಗ್ಲಪ್ರೌಢ ಶಾಲೆಯಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ಯ ಮನೆ ಅಂಗಳದಲ್ಲಿ ಯೋಗ ತರಬೇತಿ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಒತ್ತಡದ ಬದುಕು ನಿವಾರಣೆಗಾಗಿ ದೈನಂದಿನ ಜೀವನದಲ್ಲಿ ಪ್ರತಿಯೊಬ್ಬರು ಯೋಗವನ್ನು ರೂಡಿಸಿಕೊಳ್ಳಬೇಕು. ಅಂತರಾಷ್ಟ್ರೀಯ 9ನೇ ಯೋಗ ದಿನಾಚರಣೆಯ ಘೋಷವಾಕ್ಯದಂತೆ ಮನೆ ಅಂಗಳದಲ್ಲಿ ಯೋಗವನ್ನು ಅಡಿ ನಿರೋಗಿಯಾಗಿ ಇರಬೇಕು ಎಂದು ಅವರು ಸಲಹೆ ನೀಡಿದರು ಅಲ್ಲದೆ ಆರೋಗ್ಯದ ಸದೃಢತೆಗೆ ಅನಾವಶ್ಯಕ ಮಾತ್ರೆ ಔಷಧಿಗಳನ್ನು ಸೇವಿಸದೆ ಆಯುರ್ವೇದ ಉಪಚಾರ ಮತ್ತು ಆಯುರ್ವೇದ ಔಷಧಿಗಳನ್ನು ಬಳಕೆಗೆ ಸೂಕ್ತವಾಗಿದೆ ಎಂದು ಹೇಳಿದರು.

ಪಟ್ಟಣದ ಹೈ ಪ್ಲೇಯರ್ ಇಲ್ ಶಿಕ್ಷಣ ಸಂಸ್ಥೆಯ ಅಡಿಯಲ್ಲಿನ ದ. ಬ್ರಿಜ್ ಆಂಗ್ಲ ಪ್ರೌಢಶಾಲೆಯ ಅಧ್ಯಕ್ಷ ರಫೀಕಿ ನಾಮ್ದಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಯೋಗವು ಮಾನಸಿಕ ಸದೃಢತೆಗೆ ಅನುಕೂಲವಾಗಿದೆ. ವೈದ್ಯರು ನೀಡಿದ ಸಲಹೆ ಸೂಚನೆಗಳನ್ನು ಪಾಲಿಸಬೇಕು. ಅಧ್ಯಯನದಲ್ಲಿ ಯೋಗ ಏಕಾಗ್ರತೆಯನ್ನು ತಂದುಕೊಡುತ್ತದೆ ಎಂದು ಅವರು ಹೇಳಿದರು.

ಯೋಗ ಶಿಕ್ಷಕ ದತ್ತಾತ್ರೇ ಬಿರಾದರ್ ಅವರು ಯೋಗದ ಪ್ರತ್ಯಕ್ಷತೆಯನ್ನು ತೋರಿಸಿ ಕೊಟ್ಟರು. ಗಣಿತ ಶಿಕ್ಷಕ ಪ್ರಶಾಂತ ರಾಥೋಡ್, ಶಿಕ್ಷಕಿ ಪ್ರತಿಭಾ ನಾಡ್ಕರ್, ರಬಾನ, ಆಯುಷ,್ಯ ಜ್ಯೋತಿ ಸೇರಿದಂತೆ ಮಕ್ಕಳು ಶಿಕ್ಷಕರು ಉಪಸಿತರಿದ್ದರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

52 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

60 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago