ಕರವೇ ಆಳಂದ ತಾಲುಕಾ ಅಧ್ಯಕ್ಷ ಈರಣ್ಣಾ, ಉಪಾಧ್ಯಕ್ಷ ಅವಿನಾಶ ಆಯ್ಕೆ

0
16

ಕಲಬುರಗಿ : ಆಳಂದ ಪ್ರವಾಸ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಪುನಿತರಾಜ ಕವಡೆ ಅಧ್ಯಕ್ಷತೆಯಲ್ಲಿ ಕರವೇ ಸಭೆ ನಡೆಸಿ ಈ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

(ಈರಣ್ಣಾ ಜಿ. ಆಳಂದ ಧಂಗಾಪೂರ ಆಳಂದ ತಾಲೂಕಾ ಅಧ್ಯಕ್ಷ), (ಅವಿನಾಶ ಹೋಸಳಿ ಆಳಂದ ತಾಲುಕಾ ಉಪಾಧ್ಯಕ್ಷ) ಇವರನ್ನು ಆಯ್ಕೆ ಮಾಡಲಾಯಿತು.

Contact Your\'s Advertisement; 9902492681

ರಾಜ್ಯದ ಒಕ್ಕೂಟ ವ್ಯವಸ್ಥೆಯಲ್ಲಿ ಕನ್ನಡ, ಕನ್ನಡಿಗ ಮತ್ತು ಕರ್ನಾಟಕದ ಸಾರ್ವಭೌಮತೆಯನ್ನು ಕಾಪಾಡಲು ಕಳೆದ ಹಲವಾರು ವರ್ಷಗಳಿಂದ ದುಡಿಯುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯ ತತ್ವ ಸಿದ್ಧಾಂತ ಒಪ್ಪಿ ನೇಮಕ ಮಾಡಿ ಈ ನೇಮಕಾತಿ ಪತ್ರ ನೀಡಿದರು.

ನೀಡಿರುವ ಈ ಗುರುತರ ಜವಾಬ್ದಾರಿಯನ್ನು ಅತ್ಯಂತ ಶೃದ್ಧೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿ ಕರ್ನಾಟಕ ರಕ್ಷಣಾ ವೇದಿಕೆಯನ್ನು ಬಲಪಡಿಸಲು ಶಕ್ತಿಮೀರಿ ದುಡಿಯುತ್ತೀರಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here