ಕಲಬುರಗಿ: ಪ್ರಸಕ್ತ ಜೂನ್ ತಿಂಗಳ ವಿದ್ಯುತ್ ದರ ಹೆಚ್ಚಳವು ಪ್ರತಿ ಯುನಿಟ್ ಗೆ 2.89ರೂ.ಗಳಷ್ಟು ಹೆಚ್ಚಾಗುತ್ತದೆ ಎಂಬ ವರದಿಗಳು ಉದ್ಯಮ ವಲಯದಲ್ಲಿ, ವಿಶೇಷವಾಗಿ ರಾಜ್ಯದ ಸೂಕ್ಷ್ಮ ಮತ್ತು ಸಣ್ಣ ಪ್ರಮಾಣದದ ಕೈಗಾರಿಕೆಗಳಿಗೆ ಬೃಹತ್ ಪ್ರಮಾಣದ ಆಘಾತ ಉಂಟು ಮಾಡಲಿದೆ ಎಂದು ಕನ್ನಡಪರ ಹೋರಾಟಗಾರ ಆನಂದ ತೆಗನೂರ ಹೇಳಿದ್ದಾರೆ.ವಿದ್ಯುತ್ ದರ ಹೆಚ್ಚಳ ವ್ಯಾಪ್ತಿಯ ಬಗ್ಗೆ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಮೇ 12ರ ಆದೇಶದಂತೆ ಏಪ್ರಿಲ್ ಗೆ ಸಂಬಂಧಿಸಿದ ಅನುಮೋದಿತ 70 ಪೈಸೆ ಹೆಚ್ಚಳದ ಬಾಕಿ ಮತ್ತು ಜನವರಿಯ ಇಂಧನ ಮತ್ತು ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕದ ಕಾರಣದಿಂದ ಅಸಹಜ ಹೆಚ್ಚಳವಾಗಿದೆ ಎಂದು ನಾವು ಅರ್ಥ ಮಾಡಿಕೊಂಡಿದ್ದೇವೆ.ಆದರೆ ಇದು ಉದ್ಯಮದ ಮೇಲಿನ ಹೊರೆಯನ್ನು ತಗ್ಗಿಸುವ ರೀತಿಯಲ್ಲಿ ನಿಗದಿಪಡಿಸಬೇಕಾಗಿತ್ತು.
ಆರ್ಥಿಕತೆಯೂ ಸಾಮಾನ್ಯ ಸ್ಥಿತಿಗೆ ಮರಳುವವರೆಗೆ ಅಥವಾ ಕನಿಷ್ಠ ಎರಡು ವರ್ಷಗಳ ವರೆಗೆ ಉದ್ಯಮಗಳನ್ನು ಘಾಸಿಗೊಳಿಸುವ ಯಾವುದೇ ರೀತಿಯ ಏರಿಕೆಗಳನ್ನು ಮಾಡದಂತೆ ನಾವು ಸರ್ಕಾರವನ್ನು ಪದೇ ಪದೇ ಒತ್ತಾಯಿಸುತ್ತೇವೆ ಎಂದರು ಆದರೆ ಸರಕಾರಕ್ಕೆ ನಮ್ಮ ಧ್ವನಿ ಕೇಳುತ್ತಿಲ್ಲ ಎಂದು ವಿಷಾಧಿಸಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…