ಕಲಬುರಗಿ: ಸಂಗೀತ ಎಲ್ಲರನ್ನು ಒಗ್ಗೂಡಿಸುತ್ತದೆ ಎಂದು ಉಪನ್ಯಾಸಕ ದೇವಿಂದ್ರಪ್ಪ ವಿಶ್ವಕರ್ಮ ಹೇಳಿದರು.
ಅವರು ಜೇವರ್ಗಿ ನಗರದ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಸಂಗೀತ ದಿನಾಚರಣೆಯನ್ನು ಕೊಳಲು ಊದುವ ಮೂಲಕ ಉದ್ಘಾಟಿಸಿ, ಮಾತನಾಡಿದ ಅವರು ವಿಶೇಷವಾಗಿ ಗ್ರಾಮೀಣ ಭಾಗದ ಜನಪದ ಕಲೆಗಳಿಂದ ಮನುಷ್ಯನಿಗೆ ಮಾನಸಿಕ ನೆಮ್ಮದಿಯ ಜೊತೆಗೆ ಉತ್ತಮ ಆರೋಗ್ಯ ದೊರೆಯಲಿದೆ. ಮಕ್ಕಳಲ್ಲಿ ಸಂಗೀತದ ಅಭಿರುಚಿ ಬೆಳೆಸಬೇಕು.
ಆಧುನಿಕ ಕಾಲದ ಒತ್ತಡದ ಬದುಕಿನಲ್ಲಿ ಮಾನವ ಇಂದು ತನ್ನ ಜೀವನ ಸಾಗಿಸುತ್ತಿದ್ದು, ಶಾಂತಿ, ಸಮಾಧಾನ, ನೆಮ್ಮದಿ ಇಲ್ಲದಂತಾಗಿದೆ. ಸುಮಧುರವಾದ ಸಂಗೀತವನ್ನು ಆಲಿಸುವುದರಿಂದ ಮಾನಸಿಕ ಒತ್ತಡದಿಂದ ಮುಕ್ತಗೊಳಿಸಿ, ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ರೋಗವನ್ನು ನಿವಾರಣೆ ಮಾಡುವ ಶಕ್ತಿ ಸಂಗೀತಕ್ಕಿದೆಯೆಂದು ವೈಜ್ಞಾನಿಕವಾಗಿ ನಿರೂಪಣೆಯಾಗಿದ್ದು, ಸಂಗೀತದ ಮಹತ್ವ ತೋರಿಸುತ್ತದೆ.
ಅನುದಿನದ ಬದುಕಿನ ಜಂಜಾಟದಲ್ಲಿ ಮಾನವನಿಗೆ ಒಂದಷ್ಟು ಉಲ್ಲಾಸ, ಉತ್ಸಾಹ, ಸಮಾಧಾನ, ಶಾಂತಿ ಬೇಕಾಗುತ್ತದೆ. ಅಂತಹ ಶಾಂತಿ, ಉಲ್ಲಾಸ, ಉತ್ಸಾಹವನ್ನು ನೀಡುವ ಶಕ್ತಿ, ಕಲೆ, ಸಾಹಿತ್ಯ, ಸಂಗೀತಕ್ಕಿದೆ. ಸಂಗೀತ ಇಲ್ಲದೇ ಇರುವ ಯಾವ ಜಾಗವೂ ಇಲ್ಲ. ಮಗುವಿನ ತೊದಲು ಮಾತುಗಳಿಂದ ಹಿಡಿದು ಹರಿಯುವ ನದಿ, ತೊರೆಗಳಲ್ಲಿಯೂ ಸಂಗೀತ ಕೇಳಬಹುದು.
ಸಂಗೀತಕ್ಕೆ ಎಲ್ಲರನ್ನು ಸೆಳೆಯುವ ಶಕ್ತಿ ಇದೆ ಎಂದು ಹೇಳಿದರು. ಗಾನಕೋಗಿಲೆಗಳಾದ ಮೇಘಾ ಬಿರಾದಾರ, ಸಾವಿತ್ರಿ ಉತ್ತಮವಾಗಿ ಕೊಳಲು ನುಡಿಸಿದರು. ಈ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳಾದ ಅಶ್ವಿನಿ, ತಾಯಮ್ಮ, ಶಿವಾನಿ, ರೂಪಾ, ಸುಷ್ಮಾ ಸೇರಿ ಮುಂತಾದವರು ಹಾಜರಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…