ಅಕ್ಷರ ವೈಭವ ಕವನ ಸಂಕಲನಕ್ಕೆ ನುಡಿಸಿರಿ ಪುಸ್ತಕ ಪ್ರಶಸ್ತಿ

ಕಲಬುರಗಿ; ತಾಲೂಕಿನ ಹೊನ್ನಕಿರಣಗಿ ಗ್ರಾಮದ ಯುವಕವಿ ಸಂಗಮನಾಥ ಪಿ ಸಜ್ಜನ ರವರ ಅಕ್ಷರ ವೈಭವ ಎಂಬ ಚೊಚ್ಚಲ ಕವನ ಸಂಕಲನಕ್ಕೆ ಚೇತನ ಫೌಂಡೇಶನ್ ಕರ್ನಾಟಕ ಹಾಗೂ ಸಂಚಲನ ಸುದ್ದಿವಾಹಿನಿ ಇವರ ಸಂಯುಕ್ತಾಶ್ರಯದಲ್ಲಿ  ಬೆಂಗಳೂರಿನ ಕೆಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ನುಡಿ ಸಡಗರ ಎಂಬ ಸಮಾರಂಭದಲ್ಲಿ ಈ ಕವನ ಸಂಕಲನಕ್ಕೆ ನುಡಿಸಿರಿ ಪುಸ್ತಕ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಈ ಕಾರ್ಯಕ್ರಮದ ಉದ್ಘಾಟಕರಾಗಿ ಖ್ಯಾತ ಕವಿಗಳು ಎಚ್ ದುಂಡಿರಾಜ್, ಅಧ್ಯಕ್ಷತೆಯನ್ನು ಡಾ.ಜ್ಯೋತಿ ಕೆ ಸಿ ಹಾಗೂ ಮುಖ್ಯ ಅತಿಥಿಗಳಾಗಿ ಖ್ಯಾತ ಕಾದಂಬರಿಕಾರರಾದ ಯತಿರಾಜ್ ವೀರಾಂಬುಧಿಯವರು ವಹಿಸಿದ್ದರು. ಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ವಾಸುದೇವ ನಾಡಿಗ ಅಧ್ಯಾಪಕರು ಸಾಹಿತಿಗಳು ಬೆಂಗಳೂರು ಹಾಗೂ ಡಾ.ಸಿ ನಂದಿನಿ, ಚಿತ್ರ ಸಾಹಿತಿ ಹೃದಯ ಶಿವ, ಮೌಲಾಲಿ ಬೋರಗಿ, ರೂಪ ಹೊಸದುರ್ಗ, ಪಾರ್ವತಿ ಸಪ್ನ ಮುಂತಾದ ಸಾಹಿತಿಗಳು ಹಾಗೂ ಚೇತನ ಫೌಂಡೇಶನ್ ಕರ್ನಾಟಕ ಅಧ್ಯಕ್ಷರಾದ ಚಂದ್ರಶೇಖರ್ ಮಾಡಲಗೇರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಂಗಮನಾಥ ಪಿ ಸಜ್ಜನ ಅವರ ಅಕ್ಷರ ವೈಭವ ಚೊಚ್ಚಲ ಕವನ ಸಂಕಲನವು ಎರಡು ತಿಂಗಳ ಹಿಂದೆಯಷ್ಟೇ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ತಾಲೂಕು ಕಸಾಪದ ನೆರವಿನೊಂದಿಗೆ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಾಬುರಾವ ಯಡ್ರಾಮಿ, ಜಿಲ್ಲಾ ಕಸಾಪ ಅಧ್ಯಕ್ಷರಾದ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಹಾಗೂ ತಾಲೂಕು ಅಧ್ಯಕ್ಷರಾದ ಗುರುಬಸಪ್ಪ ಎಸ್ ಸಜ್ಜನಶೆಟ್ಟಿ ಅವರ ಸಮ್ಮಖದಲ್ಲಿ ಪುಸ್ತಕ ಬಿಡುಗಡೆಯಾಗಿತ್ತು.

ಕವಿಯ ಸ್ಪಂದನಾಶೀಲ ಮನಸ್ಸು ಇಲ್ಲಿನ ಕವನಗಳಲ್ಲಿ ಬದುಕು, ಅಕ್ಷರ, ದೇಶಭಕ್ತಿ, ನಾಡಭಕ್ತಿ, ತಾಯಿ ಪ್ರೇಮ, ಕಲ್ಯಾಣ ಕರ್ನಾಟಕದ ಜೀವನ, ಒಗ್ಗಟಿನ ಬದುಕನ್ನು ಪ್ರತಿಬಿಂಬಿಸುತ್ತವೆ. ಕವಿಯ ನೂರಾರು ಭಾವನೆಗಳು ಸರಳ ಮತ್ತು ಸಾಮಾನ್ಯ ಭಾಷೆಯಲ್ಲಿ ವ್ಯಕ್ತವಾಗಿವೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಶುಭ ಸಂದೇಶ ಬರೆದು ಹಾರೈಸಿದ್ದಾರೆ. ವಿಶೇಷವಾಗಿ ತಾಯಿಯೇ ಈ ಕವನ ಸಂಕಲನಕ್ಕೆ ಬೆನ್ನುಡಿಯಲ್ಲಿ ಹರಸಿ ಕನ್ನಡ ಸಾಹಿತ್ಯ ಲೋಕಕ್ಕೆ ಪರಿಚಯಿಸಿದ ಮೊದಲ ಕವನ ಸಂಕಲನವಾಗಿದೆ. ಆದರೆ ಅತಿ ಕಡಿಮೆ ಅವಧಿಯಲ್ಲಿಯೇ ಈ ಕವನ ಸಂಕಲನವು ನುಡಿಸಿರಿ ಎಂಬ ಪ್ರಶಸ್ತಿ ಮುಡಿಗೇರಿಸಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಶರಣು ಬಿ ಗದ್ದುಗೆ ಕನ್ನಡ ಜಾಗ್ರತಿ ಮಾಜಿ ಸದ್ಯಸರು ಯಾದಗಿರಿ, ಕನ್ನಡ ಅಭಿವೃದ್ದಿ ಪ್ರಾಧಿಕಾರ ಬೆಂಗಳೂರು, ಹಿರಿಯ ಮಕ್ಕಳ ಕವಿ ಎ.ಕೆ.ರಾಮೇಶ್ವರ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಸಿ.ಎಸ್.ಮಾಲಿಪಾಟೀಲ್, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಕಾರ್ಯದರ್ಶಿ ಪ್ರಕಾಶ ಅಂಗಡಿ ಕನ್ನಳ್ಳಿ, ಎಮ್.ಎನ್.ದೇಸಾಯಿ ಪದವಿ ಕಾಲೇಜಿನ ಅಧ್ಯಕ್ಷರಾದ ಸಂದೀಪ್ ದೇಸಾಯಿ ಹಾಗೂ ಶಿಕ್ಷಣ ಪ್ರೇಮಿ ಡಾ.ಕೇಶವ ಕಾಬಾ ಹರ್ಷವ್ಯಕ್ತಪಡಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

7 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

7 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420