ಕಲಬುರಗಿ: ಮರಳು ಮಾಫಿಯಾ ಮಟ್ಟ ಹಾಕಲು ಒತ್ತಾಯಿಸಿ ಪ್ರತಿಭಟನೆ

ಕಲಬುರಗಿ: ಜಿಲ್ಲೆಯಲ್ಲಿ ಕೆಲವು ವರ್ಷಗಳಿಂದ ಅಕ್ರಮ ಮರಳು ಸಾಗಾಣಿಕೆಯ ಮರಳು ಮಾಫಿಯಾ ದಿನದಿಂದ ದಿನಕ್ಕೆ ಬಲಿಷ್ಠ ಗೋಳ್ಳುತ್ತಿದೆ ಇದೊಂದು ಭಾರಿ ದೊಡ್ಡ ಮಟ್ಟದ ಕಳ್ಳ ಧಂದೆಯಾಗಿ ಮುಂದುವರೆದಿದೆ. ಇದರಲ್ಲಿ ಜಿಲ್ಲೆಯ ಮತ್ತು ಹೋರಗಿನ ಪ್ರಭಾವಿ ರಾಜಕಾರಣಿಗಳು ಮತ್ತು ಅಧಿಕಾರಿಗಳ ವರ್ಗ ಶಾಮೀಲಾಗಿರುವುದು ಅನುಮಾನವಿದೆ. ಸೂಕ್ತ ತನಿಖೆ ನಡೆಸಿ ತಪಿತಸ್ಥರನ್ನು ಬಂಧಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಶರಣಬಸಪ್ಪ ಮಮಶೇಟ್ಟಿ ಆಗ್ರಹಿಸಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಅವರು ಇತೀಚಿಗೆ ಆಕ್ರಮ ಮರಳು ಮಾಫಿಯಾ ತಡೆಯಲು ಹೋದ ಜೇವರ್ಗಿ ತಾಲೂಕಿನ ನೆಲೋಗಿ ಪೋಲಿಸ್ ಠಾಣೆ ಮುಖ್ಯ ಪೇದೆ ಮಯೂರ ರಾಠೋಡ ಬಲಿಯಾಗಿದ್ದಾರೆ. ಹೀಗೆ ಜಿಲ್ಲೆಯ ಪೋಲಿಸ್ ಮತ್ತು ಆಡಳಿತಕ್ಕೆ ಸೆಡ್ಡು ಹೊಡೆಯುವ ಮಟ್ಟಿಗೆ ಈ ಮರಳು ಮಾಫಿಯಾಗಳು ಬಲಿಷ್ಠ ವಾಗಿ ಬೆಳೆದು ನಿಂತಿದ್ದಾರೆ. ಇದರ ಹಿಂದೆ ರಾಜಕಾರಣಿಗಳು ಮತ್ತು ಅಧಿಕಾರ ವರ್ಗದ ಕೈವಾಡ ಇದೆ ಎಂದು ಅನುಮಾನ ಕಾಡುತ್ತಿದೆ ಎಂದರು.

ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಯಾಗಿದ್ದಾಗ ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಕಬ್ಬಿಣದ ಅದಿರಿನ ಭಯಾನಕ ಭಯಂಕರ ಅಕ್ರಮ ದಂಧೆಗೆ ಮೀರಿದ ಕಾನೂನು ಬಾಹಿರವಾಗಿ ರಾಜ್ಯದ ಗಣಿ ಲೂಟಿಗಿಂತ ಮೀರಿದ ಅಕ್ರಮ ಮರಳು ದಂಧೆ ನಡೆದಿದ್ದು ಇದರಲ್ಲಿ ನೂರಾರು ಕೋಟಿ ರೂಪಾಯಿ ಅಕ್ರಮ ವ್ಯವಹಾರ ಇದೆ ಎಂದು ಆರೋಪಿಸಿದ್ದಾರೆ.

ಈ ಹಿಂದೆಯೂ ಕೂಡಾ ಪೋಲಿಸರ ಮೇಲೆ ಮತ್ತು ಅಧಿಕಾರಿಗಳ ಮೇಲೆ ಕೋಲೆ ಯತ್ನ ಕೂಡ ಮಾಫಿಯಾ ಮಾಡಿದೆ. ಭದ್ರಾ ನದಿಯಲ್ಲಿ ಮರಳು ಸಾಗಾಣಿಕೆ ತಡೆಯಲು ಹೋದ ಜಿಲ್ಲಾಧಿಕಾರಿ ಕೊಲೆಯತ್ನ ನಡೆದಿದೆ• ಅಫಜಲಪುರ ತಹಸಿಲ್ದಾರರು ಮೇಲೆ ಟಿಪ್ಪರ್ ಹಾಯಿಸಿ ಕೊಲೆಗೆ ಯತ್ನ ನಡೆದಿತ್ತು.

ಈಗ ಕರ್ತವ್ಯ ನಿರತ ಪೋಲಿಸ್ ಹೆಡ್ ಕಾನಿಷ್ಟೆಬಲ್ ಹತ್ಯೆ ಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ನಾಗರಿಕ ಬಂಧುಗಳು ಮತ್ತು ಕಾನೂನು ಸುವ್ಯವಸ್ಥೆಗೆ ಸವಾಲಾಗಿರುವ ಈ ಮರಳು ಮಾಫಿಯಾ ಪೈಶಾಚಿತ ಕೃತ್ಯಗಳನ್ನು ಮಟ್ಟ ಹಾಕಲು ಇದರಲ್ಲಿ ಶಾಮೀಲಾದ ಮುಖಂಡರ ಮತ್ತು ಅಧಿಕಾರ ವರ್ಗವನ್ನು ಹದ್ ಬಸ್ತಿನಲ್ಲಿ ತರಲು ಮೃವೃ ಮಟ್ಟ ಕಠಿಣ ಕ್ರಮ ಜರುಗಿಸಬೇಕು ಮತ್ತು ಜೇವರ್ಗಿ ಘಟನೆಯಲ್ಲಿ ಶಾಮೀಲಾದ ರಾಜಕಾರಣಿಗಳು ಮತ್ತು ಇತರ ಹಿಂಬಾಲಕರನ್ನು ಗುರುತಿಸಿ ಬಂಧಿಸಿ ಜೈಲಿಗೆ ಹಾಕಬೇಕೆಂದು ಆಗ್ರಹಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

7 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

7 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420