ಕಾಯಕದಲ್ಲಿ ಸಂತೃಪ್ತಿ ಜೀವನ ಅಡಗಿದೆ; ನಿರ್ಮಲಾ ಸಿರಗಾಪುರ

ಕಲಬುರಗಿ; ಅಂದು ಜನರು ದುಡಿಮೆ ನಂಬಿ ಬದುಕುತ್ತಿದ್ದರು, ಅದಕ್ಕೆ ಜೀವನ ನೆಮ್ಮದಿಯಿಂದ ಕೂಡಿತ್ತು, ಇಂದು ಕೆಲವು ಜನರು ದುಡ್ಡು ನಂಬಿ ಬದುಕುತ್ತಿದ್ದಾರೆ ಅವರಿಗೆ ಆತ್ಮತೃಪ್ತಿ ಇಲ್ಲ, ನೆಮ್ಮದಿಯ ಜೀವನ ನಮ್ಮದಾಗಬೇಕಾದರೆ ಆಧ್ಯಾತ್ಮಿಕ ಕಾರ್ಯಕ್ರಮ ಹಾಗೂ ಗುರುಗಳ ಮಾರ್ಗದರ್ಶನ ಅವಶ್ಯಕತೆ ಇದೆ ಎಂದು ಶಿಕ್ಷಣ ಇಲಾಖೆಯಲ್ಲಿ ಸೇವೆಗೆಯುತ್ತಿರುವ ನಿರ್ಮಲಾ ಎಸ್ ಸಿರಗಾಪುರ ಹೇಳಿದರು.

ನಗರದ ಭವಾನಿ ನಗರದಲ್ಲಿರುವ ಬಬಲಾದ ಮಠದಲ್ಲಿ 164ನೇ ಶಿವನುಭವಗೋಷ್ಠಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡುತ್ತಾ ಹಿಂದೆ ಸಂತರು,ಮಾಹಾಂತರು,  ಶರಣರು ಕೂಡ ಗುರುವಿನ ಮಾರ್ಗದರ್ಶನದಿಂದ ಆದರ್ಶ ವ್ಯಕ್ತಿಗಳಾಗಿ ಅಮರರಾಗಿದ್ದಾರೆ.

ಗುರುವಿನ ಸ್ಥಾನ ಬಹಳ ಪವಿತ್ರವಾದದ್ದು ಆ ಸ್ಥಾನಕ್ಕೆ ಕಪ್ಪು ಚುಕ್ಕೆ ಬರದಂತೆ ನೋಡಿಕೊಳ್ಳುವುದು ಗುರುವಿನ ಪಾತ್ರ ಬಹು ಮುಖ್ಯವಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾದ ಕೃಷಿ ಪತ್ತಿನ ಸಹಕಾರ ಸಂಘದ ತಾಲೂಕ ಕಾರ್ಯದರ್ಶಿಗಳ ಸಂಘದ ಉಪಾಧ್ಯಕ್ಷರಾದ ಶಿವರುದ್ರ ಕರಿಕಲ್ ಕಣ್ಣಿ ಮಾತನಾಡುತ್ತಾ ಸಂದರ್ಭಗಳು ಭವಿಷ್ಯವನ್ನು ನಿರ್ಮಿಸುವುದಿಲ್ಲ ಆದರೆ ನಾವು ತೆಗೆದುಕೊಂಡ ಒಳ್ಳೆಯ ನಿರ್ಧಾರಗಳು ನಮ್ಮ ಜೀವನದ ಭವಿಷ್ಯ ನಿರ್ಮಿಸುತ್ತವೆ. ಸಮಯ ಸಂದರ್ಭದೊಂದಿಗೆ ಉತ್ತಮವಾದ ನಿರ್ಧಾರ ತೆಗೆದುಕೊಂಡ ವ್ಯಕ್ತಿ ಮಹಾನ್ ವ್ಯಕ್ತಿಯಾಗುತ್ತಾನೆ.

ಇಂದಿನ ದಿನಗಳಲ್ಲಿ ಮನುಷ್ಯರ ಮನಸ್ಸುಗಳು ಚಿಕ್ಕದಾಗಿ ಮನೆಗಳು ದೊಡ್ಡದಾಗುತ್ತಿವೆ. ಮಕ್ಕಳಿಗೆ ಹಿರಿಯರಿಂದ ಪಡೆಯಬೇಕಾಗಿದ್ದ ಸಂಸ್ಕಾರ ಸಿಗುತ್ತಿಲ್ಲ ಏಕೆಂದರೆ ಹಿರಿಯರು ವೃದ್ಧಾಶ್ರಮದಲ್ಲಿ ಆಶ್ರಯ ಪಡೆಯುತ್ತಿರುವುದು ವಿಷಾದಕರ ಬೆಳವಣಿಗೆ ನಮ್ಮ ಮಕ್ಕಳು ಸಂದಿಗ್ಧ ಪರಿಸ್ಥಿತಿಯಲ್ಲಿ  ಬದುಕು ದೂಡುತ್ತಿದ್ದಾರೆ.

ಹಿರಿಯರ ವಿಚಾರ ಅನುಭವ ಮಕ್ಕಳಿಗೆ ಕೊಡಿಸುವುದರೊಂದಿಗೆ  ಹೆತ್ತವರನ್ನು ಉತ್ತಮವಾಗಿ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನ್ಯಾಯವಾದಿ ಹಣಮಂತರಾಯ ಅಟ್ಟೂರ, ಸಂಗಮೇಶ ನಾಗೂರ, ಮಾಣಿಕ ಮಿರ್ಕಲ, ಕವಿತಾ ದೇಗಾಂವ, ರೇವಣಸಿದ್ದಯ್ಯ ಶಾಸ್ತ್ರಿ, ಶರಣು ಜವಳಗಾ, ಸಿದ್ದಣ್ಣ ವಾಡಿ, ಗುರುರಾಜ ಹಸರಗುಂಡಗಿ, ರಾಜೇಶ್ರೀ ಗುಂಡಣ್ಣ ಡಿಗ್ಗಿ, ಚಂದ್ರಕಲಾ ಕಾಳಗಿ ಸೇರಿದಂತೆ ಅನೇಕ ಜನ ಭಾಗವಹಿಸಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

13 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

13 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

13 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

13 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

13 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

14 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420