ಶಹಾಬಾದ: ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಡಾ.ರಶೀದ್ ಮರ್ಚಂಟ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ಅನ್ವರ ಪಾಶಾ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಶಹಾಬಾದ ತಾಲೂಕಿನಲ್ಲಯೇ ಹೆಸರುವಾಸಿಯಾದ ವ್ಯಕ್ತಿಯೆಂದರೆ ಡಾ.ರಶೀದ್ ಮರ್ಚಂಟ್. ಸುಮಾರು 4 ದಶಕಗಳಿಂದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುಮಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ವೃತ್ತಿಯಿಂದ ವೈದ್ಯರಾಗಿದ್ದು, ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ಹೊಂದಿದ್ದಾರೆ.ಅಲ್ಲದೇ ಬಡರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುವ ವೈದ್ಯರೆಂದರೆ ಡಾ.ರಶೀದ್. ಈ ಭಾಗದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದೆಯೆಂದರೆ ಇವರ ನಿಸ್ವಾರ್ಥ ಸೇವೆಯಿಂದಲೇ ಎಂಬುದು ಎರಡು ಮಾತಿಲ್ಲದೀ ಹಿಂದೆ ಶಹಾಬಾದ ಮತಕ್ಷೇತ್ರದಿಂದ ಬಾಬುರಾವ ಚವ್ಹಾಣ ಮಂತ್ರಿಯಾಗಿದ್ದು, ಜಿ.ರಾಮಕೃಷ್ಣ ಅವರು ಶಾಸಕರಾಗಿದ್ದು ನಮ್ಮ ಮತಕ್ಷೇತ್ರದಲ್ಲಿ ಹೆಚ್ಚಿನ ಲೀಡ್ ಕೊಟ್ಟಿದ್ದೆ ಕಾರಣ. ಪಕ್ಷದಲ್ಲಿ ಶಿಸ್ತು ಮತ್ತು ಒಗ್ಗಟ್ಟಿನ ಪ್ರದರ್ಶನ ನೀಡಿದ್ದರಿಂದ ಬಿಜೆಪಿ ಶಾಸಕರಾಗಿದ್ದರೂ ಕೂಡ, ನಗರಸಭೆಯಲ್ಲಿ ಅತ್ಯಧಿಕ ಸದಸ್ಯರನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ.
ನಗರಸಭೆಯ ಚುಕ್ಕಾಣಿ ಕಾಂಗ್ರೆಸ್ ಪಕ್ಷದ ಹಿಡಿತದಲ್ಲಿದೆ.ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಸುಮಾರು ದಶಕಗಳಿಂದ ಪಕ್ಷಕ್ಕಾಗಿ ದುಡಿದ ಡಾ.ರಶೀದ್ ಮರ್ಚಂಟ್ ಅವರನ್ನು ಗುರುತಿಸಿ, ಅವರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಿದರೆ ಪಕ್ಷಕ್ಕೆ ಆನೆ ಬಲ ಬಂದಂತಾಗುತ್ತದೆ.ಆದ್ದರಿಂದ ರಾಷ್ಟ್ರೀಯ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆಯುವ ಮೂಲಕ ಅನ್ವರ ಪಾಶಾ ಮನವಿ ಮಾಡಿದ್ದಾರೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…