ಕಲಬುರಗಿ: ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ನಿಮಿತ್ತ ವಚನ ಪಿತಮಹ ಡಾ. ಫ. ಗು.ಹಳಕಟ್ಟಿ ಜಯಂತಿ ಗೆ ಜುಲೈ 2 ರಂದು ಸರ್ಕಾರದ ಅಧಿಕೃತ ಆದೇಶ ಮೇರೆಗೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಜಯಂತೋತ್ಸವ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆ ಗೊಂಡ ಜಯಂತಿ ಸಮಿತಿಯ ಸದಸ್ಯರ ಸ್ವಗ್ರಹದಲ್ಲಿ ಸನ್ಮಾನಿಸಲಾಯಿತು.
ಈ ವೇಳೆ ನಿಕಟಪೂರ್ವ ಸಮಿತಿ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿದ ನ್ಯಾಯವಾದಿ ಶಿವಲಿಂಗಪ್ಪಾ ಅಷ್ಟಗಿ ಯವರು ಮಾತನಾಡಿ ಕಳೆದ ವರ್ಷ ಮೊಟ್ಟ ಮೊದಲು ಕಾರ್ಯಕ್ರಮ ಸರ್ಕಾರ ಹಮ್ಮಿಕೊಂಡ ಪ್ರಯುಕ್ತ ಒಂದು ಶಾಶ್ವತ ಸಮಿತಿ ರಚಿಸಿ ಚಾಲನೆ ನೀಡಿದ್ದೇನೆ. ಎರಡನೇ ವರ್ಷ ಕಾರ್ಯಕ್ರಮಕ್ಕೆ ಸಮಾಜದ ಹಿರಿಯ ಹಿತಚಿಂತಕ, ಲೇಖಕ ಹಾಗೂ ರಾಜ್ಯ ಹಟಗಾರ ಸಮಾಜದ ಸಂಸ್ಥಾಪಕ ಸದಸ್ಯರಾದ ಸೂರ್ಯಕಾಂತ ಸೊನ್ನದ ಆಯ್ಕೆಗೊಂಡಿದ್ದು ಹರ್ಷವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಅವರ ಮಾರ್ಗದರ್ಶನದಲ್ಲಿ ಹೆಚ್ಚಿನ ಬೆಳವಣಿಗೆಯಾಗಲಿ ಎಂದು ಬಯಸುತೇನೆ ಎಂದರು.
ನ್ಯಾಯವಾದಿ ಹಾಗೂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಾಜಗೋಪಾಲ ಭಂಡಾರಿ ನೇಕಾರರ ಅಸ್ಮಿತೆ ಜಾಗೃತಿಗೊಳ್ಳುತ್ತಿದೆ ಎಂದರು. ಶ್ರೀ ರಾಮಲಿಂಗ ಚೌಡೇಶ್ವರಿ ಸೇವಾ ಸಮಿತಿಯ ಸದಸ್ಯರಾದ ಷಣ್ಮುಖಪ್ಪಾ ಮಿಟ್ಟಾ ರವರು ಜಯಂತೋತ್ಸವ ಆಯ್ಕೆ ಗೊಂಡ ಸೊನ್ನದ ರವನ್ನು ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ಗೌರವಿಸಿದರು.
ಜಿಲ್ಲಾ ಹಟಗಾರ ಸಮಾಜದ ಕಾರ್ಯದರ್ಶಿ ಜೇನವೆರಿ ವಿನೋದ ಕುಮಾರ ವಂದಿಸಿದರು. ಕಾರ್ಯಕ್ರಮದಲ್ಲಿ ಶ್ರೀನಿವಾಸ ಬಲಪೂರ್, ಚಂದ್ರಶೇಖರ್ ಮ್ಯಾಳಗಿ ಸಂತೋಷ ಗುರುಮಿಟ್ಕಲ ಮತ್ತು ವಿಶ್ವರಾಜ ಮಿಟಾ, ಶರಣ ಪ್ರಸಾದ್ ಜೇನವೆರಿ ಉಪಸ್ಥಿತರಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…