ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ; ಆಳಂದ ಮೂಲದ 7 ಜನರ ಸಾವು

0
53

ಕಲಬುರಗಿ: ನೆರೆಯ ಮಹಾರಾಷ್ಟ್ರದ ಅಕ್ಕಲಕೋಟ ತಾಲೂಕಿನ ಸಿರಿವಳ್ವಾಡಿ ಹತ್ತಿರ ಶುಕ್ರವಾರ ಕ್ರೂಜರ್ ಮತ್ತು ಟ್ಯಾಂಕರ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಜಿಲ್ಲೆಯ ಆಳಂದ ತಾಲೂಕಿನ ಅದೂ ಗ್ರಾಮದ ಏಳು ಜನರು ಮೃತಪಟ್ಟಿದ್ದಾರೆ.

ಮೃತರು ಆಳಂದ ತಾಲೂಕಿನ ಅಣೂರ ಗ್ರಾಮದವರು ಎಂದು ತಿಳಿದುಬಂದಿದ್ದು, ಆಷಾಢ ಏಕಾದಶಿ ನಿಮಿತ್ಯ ನಿನ್ನೆ ಪಂಢರಪುರಕ್ಕೆ ಹೋಗಿದ್ದರು. ಇಂದು ವಾಪಸ್ ಬರುವಾಗ ಶಿರವಾಳವಾಡಿ ಹತ್ತಿರ ಕ್ರೂಜರ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಎಳು ಜನರು ಮೃತಪಟ್ಟಿದ್ದಾರೆ.

Contact Your\'s Advertisement; 9902492681

ಇಲ್ಲಿಯವರೆಗೆ ಅಪಘಾತದಲ್ಲಿ ಕ್ರೂಜರ್ ನಲ್ಲಿದ್ದ ಮೃತರ ಸಂಖ್ಯೆ 7 ಎಂದು ತಿಳಿದು ಬಂದಿದೆ. ಮೃತಪಟ್ಟರು ಹೆಸರು ವಿವರ ಇನ್ನೂ ಗೊತ್ತಾಗಿಲ್ಲ. ಕ್ರೂಸರ್ ಹಾಗೂ ಬೂದಿ ಸಾಗಿಸುವ ಟ್ಯಾಂಕರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಆಳಂದ ಪೊಲೀಸರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here