ಆಳಂದ: ಗ್ರಾಮೀಣ ಭಾಗದಲ್ಲಿರುವ ಅನೇಕ ಸಮಸ್ಯಗಳಿಗೆ ಬೆಳಕು ಚಲ್ಲುವ ಜತೆಗೆ ಪ್ರತಿಭಾವಂತರನ್ನು ಗುರುತಿಸಿ ಅವರಿಗೆ ಪ್ರೋತ್ಸಾಹಿಸುವ ಭಗತ್ ಸಿಂಗ್ ಯುವಕ ಸಂಘದ ಸಮಾಜಮುಖಿ ಕಾರ್ಯ ಇನ್ನೊಬ್ಬರಿಗೆ ಮಾದರಿಯಾಗಿದೆ ಎಂದು ಬಂಗರಗಾ ಚರಂತೇಶ್ವರ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರಿಜ್ವಾನ ಶೇಖ್ ಅಭಿಮತಪಟ್ಟರು.
ತಾಲೂಕಿನ ಬಬಲೇಶ್ವರ ಗ್ರಾಮದ ಭಗತ ಸಿಂಗ್ ಯುವಕ ಸಂಘದ ವತಿಯಿಂದ ಪ್ರಾಥಮಿಕ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೆಡಲ್, ಕಪ್ಗಳು ನೀಡಿ ಗೌರವಿಸುವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಇಲ್ಲಿನ ಸಂಘದವರು ವಿದ್ಯಾರ್ಥಿಗಳಿಗೆ ಸನ್ಮಾನಿಸುವ ಕಾರ್ಯ ಮಾಡುತ್ತಿರುವದರಿಂದ ಗ್ರಾಮದಲ್ಲಿ ಪ್ರತಿಭೆಗಳು ಅರಳಲು ಸಾಧ್ಯವಾಗುತ್ತಿದೆ ಎಂದು ತಿಳಿಸಿದರು.
ಸಂಘದ ಉಪಾಧ್ಯಕ್ಷ ಗೌತಮ ಕಾಂಬಳೆ ಅಧ್ಯಕ್ಷತೆವಹಿಸಿ ಮಾತನಾಡಿ, ಗ್ರಾಮದ ಸಮಸ್ಯಗಳಿಗೆ ಪರಿಹರಿಸುವ ಜತೆಗೆ ಶಿಕ್ಷಣ, ಆರೋಗ್ಯ, ಸ್ವಚ್ಛತೆ ಕಡೆಗೆ ಸಂಘ ಹೆಚ್ಚಿನ ಗಮನ ನೀಡುತ್ತಿದೆ ಎಂದರು. ಶಾಲೆಯ ಮುಖ್ಯ ಶಿಕ್ಷಕ ದತ್ತಪ್ಪ ಪೂಜಾರಿ ಸಭೆಯಲ್ಲಿ ಮಾತನಾಡಿದರು. ಸಂಘದ ಕಾರ್ಯದರ್ಶಿ ಗುಂಡಪ್ಪ ಪೂಜಾರಿ, ಸಹ ಕಾರ್ಯದರ್ಶಿ ಅಜೀಜ ಮಕನದಾರ, ಸದಸ್ಯ ರಿಯಾಜ ಶೇಖ್, ಸಂತೋಷ ಸೂರವಸೆ, ಸಜ್ಜಾದ ಶೇಖ್, ಫಯಾಜ ಶೇಖ್, ಸುರಜ ಕಾಂಬಳೆ, ಸಾಗರ ಖಡಾಗಾಳೆ, ಸಾಯಿಲ್ ಮುಜಾವರ, ಮೌಲಾ ಮುಜಾವರ ಸೇರಿದಂತೆ ಇತರರು ಭಾಗವಹಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಶಾಲಾ ಸುಧಾರಣಾ ಸಮಿತಿಯ ಅಧ್ಯಕ್ಷ ಕೇದಾರನಾಥ ಕರಬಸಪ್ಪ ಪಾಟೀಲ್, ಉಪಾಧ್ಯಕ್ಷ ನಾಗಯ್ಯ ಸ್ವಾಮಿ ಇವರನ್ನು ಸಂಘದಿಂದ ಗೌರವಿಸಲಾಯಿತು. ಸಂಘದ ಸದಸ್ಯರು, ಪಾಲಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…