ಟ್ಯಾಂಕರ್ ಮೂಲಕ , ಕುಡಿಯುವ ನೀರು ಸರಬರಾಜು ಮಾಡದಿದ್ದರೆ ಉಗ್ರ ಹೋರಾಟ

0
15

ಕಲಬುರಗಿ: ಮುಂಗಾರು ಮಳೆಗೆ ಹಿನ್ನಡೆ ಯಾಗಿರುವುದರಿಂದ ಕಲಬುರಗಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.ಇದರಿಂದ ಜನತೆ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.ಆದರೆ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೇ ಕುಡಿಯುವ ನೀರು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ಆಗ್ರಹಿಸಿದ್ದಾರೆ.

ಜೂನ್ ತಿಂಗಳಲ್ಲಿ ಬರಬೇಕಾಗಿದ್ದ ಮಳೆ ಸಧ್ಯದ ಮಟ್ಟಿಗೆ ಸಂಪೂರ್ಣ ಕೈ ಕೊಟ್ಟಿದೆ.ಈ ವರ್ಷ ಬಿಸಿಲಿನ ಪ್ರಖರತೆ ಹೆಚ್ಚಾಗಿದ್ದರಿಂದ ಬಾವಿಗಳು ಹಾಗೂ ಕೊಳವೆ ಬಾವಿಗಳು ಬತ್ತಿ ಹೋಗಿವೆ.ಕಲಬುರಗಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಜಾನುವಾರಗಳಿಗೆ ಕುಡಿಯಲು ನೀರು ಸಿಗುತ್ತಿಲ್ಲ.ಇದರಿಂದ ಪರಿಸ್ಥಿತಿ ಗಂಭೀರವಾಗಿದ್ದು ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

Contact Your\'s Advertisement; 9902492681

ಕಲಬುರಗಿ ನಗರದಲ್ಲಿ ಮೇ ತಿಂಗಳ ಮೊದಲ ವಾರದಲ್ಲೇ ಹಲವು ಬಡಾವಣೆಗಳಲ್ಲಿ ಕೊಳವೆ ಬಾವಿಗಳು ಬತ್ತಿ ಹೋಗಿವೆ.ಜನರು ದಿನ ನಿತ್ಯ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ.ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಟ್ಯಾಂಕರ್ ವ್ಯವಸ್ಥೆ ಮಾಡಿಲ್ಲ.ಜಿಲ್ಲಾಧಿಕಾರಿಗಳು ಜನರಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಸೂಚಿಸಿದ್ದರೂ ಅವರ ಮಾತಿಗೆ ಅಧಿಕಾರಿಗಳು ಕವಡೆ ಕಿಮ್ಮತ್ತು ನೀಡುತ್ತಿಲ್ಲ.

ಜನರು ಕುಡಿಯುವ ನೀರಿಗಾಗಿ ಒತ್ತಾಯಿಸುತ್ತಿದ್ದಾರೆ.ಆದರೆ ಕ್ಯಾರೇ ಅನ್ನುತ್ತಿಲ್ಲ.ನಗರದ ಜಯನಗರ,ತಿಲಕ ನಗರ, ಆದರ್ಶ ನಗರ ಸೇರಿದಂತೆ ಹಲವು ಬಡಾವಣೆಗಳಲ್ಲಿ ನೀರಿನ ಸಮಸ್ಯೆ ತಲೆದೋರಿದೆ.ಇನ್ನು ನಲ್ಲಿಗಳಲ್ಲಿ ವಾರಗಟ್ಟಲೆ ನೀರು ಸರಬರಾಜು ಆಗುತ್ತಿಲ್ಲ.ಇದರಿಂದ ಮತ್ತಷ್ಟು ತೊಂದರೆ ಹೆಚ್ಚಾಗಿದೆ.ಕೂಡಲೇ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಬೇಕು.ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here