ಕಲಬುರಗಿ: ಈ ಮೊದಲು ಕಲಬುರಗಿ ನಗರದಲ್ಲಿ ನೃಪತುಂಗ ಬಸ್ಸಗಳ ಸಂಖ್ಯೆ ಹೆಚ್ಚಾಗಿತ್ತು, ಆಗ ಎಲ್ಲಾ ಸಾರ್ವಜನಿಕರು ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳ ಸಂಚಾರಕ್ಕೆ ಯಾವುದೇ ಅಡ್ಡಿ ಆತಂಕಗಳು ಎದುರಾಗಿರುವುದಿಲ್ಲ.ಆದರೆ ಈಗ ಸರಕಾರವು ಉಚಿತ ಬಸ ವ್ಯವಸ್ಥೆ ಕೈಕೊಂಡ ನಂತರ ಈ ನೃಪತುಂಗ ಬಸ್ ಗಳ ಓಡಾಟ 50% ಕಡಿಮೆಯಾಗಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ಹಾಗೂ ವಿದ್ಯಾರ್ಥಿಗಳು ಸಂಚಾರಕ್ಕೆ ತುಂಬಾ ಸಂಕಷ್ಟ ಪಡುತ್ತಿದ್ದಾರೆ ಎಂದು ಕರವೇ(ಕನ್ನಡಿಗರ ಬಣ) ಸಂಘಟನೆಯ ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ನಗರದಲ್ಲಿ ಮೊದಲಿನಂತೆ ಸದರಿ ನೃಪತುಂಗ ಬಸ್ಸುಗಳು ಸಂಚಾರ ಹೆಚ್ಚಿಸಿ ಸಾರ್ವಜನಿಕರ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಹೆಚ್ಚಿನ ಬಸ್ಸುಗಳನ್ನು ಓಡಿಸಬೇಕು ಎಂದು ಅವರು ಒತ್ತಾಯಿಸಿದರು.
ಕೂಡಲೇ ಮುಂದಿನ ಅನಾಹುತಗಳನ್ನು ತಪ್ಪಿಸಲು ಕೂಡಲೇ ತಾವೂಗಳು ಹೆಚ್ಚಿನ ಬಸ್ಸುಗಳಿಗಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿ ಹೆಚ್ಚಿನ ಬಸ್ ಓಡಿಸುವ ಕುರಿತು ಚಿಂತನೆ ನಡೆಸಬೇಕು. ಒಂದು ವೇಳೆ ವಾರದಲ್ಲಿ ಕ್ರಮಕೈಗೊಳ್ಳದೇ ಹೋದ ಪಕ್ಷದಲ್ಲಿ ಎಲ್ಲಾ ರಿಂಗ ರಸ್ತೆಗಳಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾದ್ಯಕ್ಷ ಅಶ್ವಿನಕುಮಾರ ರಂಗದಾಳ,ಅಲೋಕ ವೈಜೊಳೆ,ಆನಂದ ಮಾಲಿಪಟೀಲ, ಲಿಂಗರಾಜ ದೇವಣಿ,ಗುರು ಜಬಾಡೆ, ಪವನ ಬಾಸುತ್ಕರ್, ದಶರಥ ಸೋಲಂಕೆ,ಅವಿನಾಶ ಗುತ್ತೇದಾರ, ಹರೀಶ ಗುತ್ತೇದಾರ ಸೇರಿದಂತೆ ಕಾರ್ಯಕರ್ತರು ಇದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…