ಕಲಬುರಗಿ: ವೈಯಕ್ತಿಕ ಜೀವನದ ನಡುವೆಯೂ ಸಮಾಜಕ್ಕಾಗಿ ಸ್ವಲ್ಪಸಮಯ ಮೀಸಲಿಡಬೇಕು ಎಂದು ಅಕ್ಕಮಹಾದೇವಿ ಆಶ್ರಮದ ಶ್ರೀ ಪ್ರಭುದೇವಿ ತಾಯಿ ಸಲಹೆ ನೀಡಿದರು.
ನಗರದ ಕೋಹಿನೂರ ಪದವಿ ಕಾಲೇಜಿನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ ಶನಿವಾರ ಆಯೋಜಿಸಿದ್ದ ವೈದ್ಯ, ಪತ್ರಕರ್ತರ ಹಾಗೂ ಸಿಎ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜಕ್ಕೆ ವೈದ್ಯರ, ಪತ್ರಕರ್ತರ ಹಾಗೂ ಸಿಎ ಅವರ ಕೊಡುಗೆ ಅನನ್ಯವಾಗಿದೆ. ಮನುಷ್ಯರಿಗೆ ಅನಾರೋಗ್ಯದ ಸಮಸ್ಯೆ ಉಂಟಾದಾಗ ವೈದ್ಯರು ಚಿಕಿತ್ಸೆ ಮೂಲಕ ರೋಗ ಗುಣಪಡಿಸುತ್ತಾರೆ. ಸಮಾಜಕ್ಕೆ ರೋಗ ಅಂಟಿಕೊಂಡಾಗ ಲೇಖನಿಯ ಮೂಲಕ ರೋಗ ನಿವಾರಿಸವ ಕಾರ್ಯ ಪತ್ರಕರ್ತರು ಮಾಡುತ್ತಾರೆ. ದೇಶದ ಆರ್ಥಿಕತೆ ಸುಧಾರಣೆಯಲ್ಲಿ ಸಿಎಗಳಪಾತ್ರ ಪ್ರಮುಖವಾಗಿದೆ ಎಂದು ಸ್ಮರಿಸಿದರು.
ಕೋಹಿನೂರ ಪದವಿ ಕಾಲೇಜಿನ ಆಡಳಿತಾಧಿಕಾರಿ ವಿ.ಎಂ. ಹಿರೇಮಠ ಮಾತನಾಡಿ, ದೇಶದ ಅಭಿವೃದ್ದಿಗೆ ಜಿಎಸ್ ಟಿ ಪಾತ್ರ ಪ್ರಮುಖವಾಗಿದೆ. ಸಾರ್ವಜನಿಕರು ಕಟ್ಟುವ ತೆರಿಗೆಯಿಂದ ದೇಶದ ಅಭಿವೃದ್ಧಿ ಸಾಧ್ಯ. ಸರ್ಕಾರಿ ನೌಕರರು ಮಾತ್ರ ಸರಿಯಾಗಿ ತೆರಿಗೆ ಕಟ್ಟುತ್ತಾರೆ. ಕೃಷಿ ಕ್ಷೆತ್ರಕ್ಕೆ ಮಾತ್ರ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದು ವಿವರಿಸಿದರು.
ಬಸವೇಶ್ವರ ಆಸ್ಪತ್ರೆಯ ತಜ್ಞ ವೈದ್ಯ ಡಾ. ವಿಶ್ವರಾಜ ತಡಕಲ್, ಹಿರಿಯ ಪತ್ರಕರ್ತ ಶಾಮಸುಂದರ ಕುಲಕರ್ಣಿ, ತೆರಿಗೆ ಸಲಹೆಗಾರ ಚನ್ನಬಸಪ್ಪ ಊಡಗಿ, ವಿ.ಎಂ.ಹಿರೇಮಠ ಅವರನ್ನು ಸನ್ಮಾನಿಸಲಾಯಿತು.
ಪ್ರಾಚಾರ್ಯ ಎಚ್.ಬಿ.ಕಂಟೆಗೋಳ್ ಅಧ್ಯಕ್ಷತೆ ವಹಿಸಿದ್ದರು. ಬಸವೇಶ್ವರ ಸಮಾಜಸೇವಾ ಬಳಗದ ಅಧ್ಯಕ್ಷ ಉಪನ್ಯಾಸಕ ಎಚ್.ಬಿ.ಪಾಟೀಲ್, ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗೆಪ್ಪ ಬಿರಾದಾರ, ಶಿಕ್ಷಕರಾದ ಉಮಾದೇವಿ,ಸವಿತಾ ಕಲಾಲ್,ನಾಗರಾಜ ಜಮಾದಾರ, ಜ್ಯೋತಿ ಪಾಟೀಲ್ ಉಪಸ್ಥಿತರಿದ್ದರು. ವಿದ್ಯಾರ್ಥಿ ವಿಶಾಲ ಕಾರ್ಯಕ್ರಮ ನಿರೂಪಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…