ಕಲಬುರಗಿ: ಸಾಹಿತ್ಯ, ಸಂಸ್ಕøತಿಯ ಸದಭಿರುಚಿಯನ್ನು ಇಂದಿನ ಸಮಾಜಕ್ಕೆ ಪರಿಚಯಿಸುವುದರೊಂದಿಗೆ, ಯುವಕರಲ್ಲಿ ಆತ್ಮವಿಶ್ವಾಸ ವೃದ್ಧಿಯ ಜತೆಗೆ ಭಾಷೆ, ಸಾಹಿತ್ಯ ಮತ್ತು ಸಂಸ್ಕøತಿ ಕುರಿತ ಅರಿವನ್ನು ವಿಸ್ತರಿಸುವ ಉದ್ದೇಶದಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜುಲೈ 3 ರಂದು ಸಾಯಂಕಾಲ 4.15 ಕ್ಕೆ ನಗರದ ಕನ್ನಡ ಭವನದಲ್ಲಿ ಭಾಷೆ-ಸಂಸ್ಕøತಿ-ಕಲೆಯ ಸಂಭ್ರಮದ `ಸಂಸ್ಕøತಿ ಸೌರಭ’ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಇಂದಿನ ಹೊಸ ಪೀಳಿಗೆಯಲ್ಲಿ ಭಾರತೀಯ ಸಂಸ್ಕøತಿ ಮತ್ತು ಕಲೆಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶ ಈ ಕಾರ್ಯಕ್ರಮ ಹೊಂದಿದೆ. ಪ್ರತಿಯೊಬ್ಬರೂ ಸಂಸ್ಕøತಿಯ ಪರಂಪರೆ ಕುರಿತು ಅರಿವು ಬೆಳೆಸಿಕೊಂಡರೆ ಇದರಿಂದಾಗಿ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕøತಿಯನ್ನು ಪರಿಚಯಿಸಲು ಸಾಧ್ಯವಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
ಶ್ರೀನಿವಾಸ ಸರಡಗಿಯ ಶ್ರೀ ಅಪ್ಪಾರಾವ ದೇವಿ ಮುತ್ಯಾ ಅವರ ದಿವ್ಯ ಸಾನಿಧ್ಯದಲ್ಲಿ ಜರುಗಲಿರುವ ಸಮಾರಂಭವನ್ನು ಸಿಐಡಿ ವಿಭಾಗದ ಡಿವೈಎಸ್ಪಿ ಶಂಕರಗೌಡ ಪಾಟೀಲ ಉದ್ಘಾಟಿಸಲಿದ್ದಾರೆ. ವೈದ್ಯ ಚಿಂತಕಿ ಡಾ. ಭಾಗ್ಯಶ್ರೀ ಶರಣಪ್ರಕಾಶ ಪಾಟೀಲ, ಹಿರಿಯ ಪತ್ರಕರ್ತ ದೇವಯ್ಯಾ ಗುತ್ತೇದಾರ, ಪ್ರಾಧ್ಯಾಪಕ ಡಾ. ಬಾಬುರಾವ ಶೇರಿಕಾರ, ಬಸವಪ್ರಭು ಮುಡುಬಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಂಶೋಧಕ ಸಾಹಿತಿ ಮುಡುಬಿ ಗುಂಡೇರಾವ ನೇತೃತ್ವ ವಹಿಸಲಿದ್ದಾರೆ. ಕಲೆಗಳ ಉಳಿವಿಗಾಗಿ ಶ್ರಮಿಸುತ್ತಿರುವ ವಿವಿಧ ಕ್ಷೇತ್ರದ ಪ್ರಮುಖರನ್ನು ಗೌರವಿಸಲಾಗುವುದು.
ಇತ್ತೀಚೆಗೆ ನಡೆದ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ 90 ಕ್ಕೂ ಹೆಚ್ಚು ಪ್ರತಿಶತ ಅಂಕ ಗಳಿಸಿದ ಜಿಲ್ಲೆಯ ವಿದ್ಯಾರ್ಥಿಗಳನ್ನು ಸತ್ಕರಿಸಲಾಗುತ್ತಿದ್ದು, ಆಸಕ್ತರು ಮೊ. 98803 49025 ಅಥವಾ 98865 60869 ಗೆ ಸಂಪರ್ಕಿಸಿ ಹೆಸರು ನೋಂದಾಯಿಸಲು ಕೋರಿದೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…