ಕಲಬುರಗಿ: ಸ್ಥಳೀಯ ಕೆಬಿಎನ್ ವಿವಿಯ ವೈದ್ಯಕೀಯ ವಿಭಾಗದಲ್ಲಿ ವೈದ್ಯರ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿಜಯ ಕರ್ನಾಟಕದ ಸ್ಥಾನಿಕ ಸಂಪಾದಕ ದೇವಯ್ಯ ಗುತ್ತೇದಾರ ಭಾಗವಹಿಸಿ ಮಾತನಾಡಿದರು. ಜಗತ್ತಿನಲ್ಲಿ ವೈದ್ಯರ ಪಾತ್ರ ಬಹುಮುಖ್ಯ. ವೈದ್ಯರು ದೇವರ ಸ್ವರೂಪ ಎಂದರೆ ತಪ್ಪಾಗಲಾರದು. ಕೋವಿಡ್ ಸಮಯದಲ್ಲಿ ವೈದ್ಯರೇ ಭುವಿಯನ್ನು ಕಾಪಾಡಿದರು ಎಂದು ಅವಿರತ ಸೇವೆ ನೆನೆದರು.
ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ ಸಿದ್ದೇಶ ಇವರು ವೈದ್ಯರ ದಿನದ ಮಹತ್ವ ತಿಳಿ ಹೇಳಿದರು. ಅಲ್ಲದೇ ಪತ್ರಿಕಾ ದಿನಾಚರಣೆಯ ಶುಭಾಶಯಗಳನ್ನು ಹೇಳಿ ಪತ್ರಿಕೋದ್ಯಮ ಸಮಾಜವನ್ನು ತಿದ್ದುತ್ತದೆ ಎಂದರು. ಇದೆ ಸಂದರ್ಭದಲ್ಲಿದಲ್ಲಿ ಲೆಕ್ಕ ಪರಿಶೋಧಕ ದಿನದ ಶುಭಾಶಯಗಳನ್ನು ಕೂಡ ತಿಳಿಸಿದರು. ಲೆಕ್ಕ ಪರಿಶೋಧಕರು ಸಮಾಜದ ಶ್ರೀಮಂತಿಕೆಯನ್ನು ಕಾಪಾಡುತ್ತಾರೆ ಎಂದರು.
ಡಾ. ಬಿ. ಸಿ ರೊಯ್ ಅವರ ಕೊಡುಗೆಗಳನ್ನು ಸ್ಮರಿಸಲಾಯಿತು. ಡಾ ವಿಜಯ ಮೋಹನ್ ಅವರನ್ನು ಕೆಬಿಎನ್ ಸಂಸ್ಥೆಗೆ ನೀಡಿದ ಕೊಡುಗೆ ಮತ್ತು ಸೇವೆಗಾಗಿ ಸನ್ಮಾನಿಸಲಾಯಿತು.
ಡಾ. ಪಿ ಎಸ್ ಶಂಕರ ಸ್ವಾಗತಿಸಿದರು. ಡಾ.ಶ್ರೀರಾಜ್ ಮತ್ತು ಡಾ ಆಫನಾ ನಿರೂಪಿಸಿದರೆ, ಡಾ.ಸಂಗೀತಾ ರುದ್ರವಾಡಿ ವಂದಿಸಿದರು. ಕಾರ್ಯಕ್ರಮದಲ್ಲಿ ಡಾ ಸಿದ್ರಾಮ್, ಸಂಶೋಧನಾ ಡೀನ್ ಡಾ. ಪಾಲಾದಿ, ಡಾ. ಗುರುಪ್ರಸಾದ್, ಡಾ. ಮೊಯಿನುದ್ದೀನ್, ಡಾ. ದೇವನಿ, ಡಾ. ರಾಧಿಕಾ ಮತ್ತು ಇತರ ವಿಭಾಗದ ಮುಖ್ಯಸ್ಥ ರು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ವೈದ್ಯರ ದಿನದ ಅಂಗವಾಗಿ ಏರ್ಪಡಿಸಿದ ರಕ್ತ ದಾನ ಶಿಬಿರದಲ್ಲಿ ಕೆಬಿಎನ್ ವಿವಿಯ ವೈದ್ಯರು ಮತ್ತು ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…